ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ಕೊಕ್: ಕಳೆದ 5 ವರ್ಷದಿಂದ ಸಭೆಗೆ ಹಾಜರಾಗಿರಲಿಲ್ಲ ಎಂದ ವರುಣ್ ಗಾಂಧಿ

ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ತಮ್ಮನ್ನು ಕೈಬಿಟ್ಟ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ನಾನು ಕಳೆದ 5 ವರ್ಷಗಳಿಂದ ಕಾರ್ಯಕಾರಿ ಸಮಿತಿ ಸಭೆ ಹಾಜರಾಗಿಲಿಲ್ಲ ಎಂದು ಹೇಳಿದ್ದಾರೆ.
ವರುಣ್ ಗಾಂಧಿ
ವರುಣ್ ಗಾಂಧಿ
Updated on

ನವದೆಹಲಿ: ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ತಮ್ಮನ್ನು ಕೈಬಿಟ್ಟ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ನಾನು ಕಳೆದ 5 ವರ್ಷಗಳಿಂದ ಕಾರ್ಯಕಾರಿ ಸಮಿತಿ ಸಭೆ ಹಾಜರಾಗಿಲಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರ ಸಾವಿನ ಬಗ್ಗೆ ಮಾತನಾಡಿದ್ದ ಬಿಜೆಪಿ ಸಂಸದ ವರುಣ್‌ ಗಾಂಧಿಯನ್ನು ಗುರುವಾರ 80 ಸದಸ್ಯರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. ಹಾಗೆಯೇ ತಾಯಿ ಮನೇಕಾ ಗಾಂಧಿಯನ್ನು ಕೂಡಾ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ. 

ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನು 5 ವರ್ಷದಲ್ಲಿ ಒಂದೇ ಒಂದು ಸಲವೂ ಈ ಸಭೆಗೆ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಕಳೆದ ಐದು ವರ್ಷದಿಂದ ನಾನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಯಾವುದೇ ಒಂದು ಸಭೆಗೂ ಹಾಜರಾಗಿಲ್ಲ, ನಾನು ಅದರಲ್ಲಿ ಇದ್ಧೇನೆ ಎಂದು ನನಗೆ ಅನಿಸುತ್ತಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com