ಕೇರಳ: ಪ್ರವಾಹದ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ; ಕಲ್ಯಾಣ ಮಂಟಪ ತಲುಪಿದ್ದೇ ರೋಚಕ!

ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಲಪ್ಪುಳ ದಂಪತಿ
ಆಲಪ್ಪುಳ ದಂಪತಿ

ಆಲಪ್ಪುಳ: ಕೇರಳದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಕೂಡ ಇದ್ದು, ಇದರ ನಡುವೆ ಜೋಡಿಯೊಂದು ಮದುವೆ ಮುಂದೂಡದೆ ವಿಭಿನ್ನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಲವಾಡಿಯ ದೇವಸ್ಥಾನಕ್ಕೆ ಹೊಂದಿಕೊಂಡ ಕಲ್ಯಾಣಮಂಟಪದಲ್ಲಿ ಆಕಾಶ್​​ ಮತ್ತು ಐಶ್ವರ್ಯ ಮದುವೆಯಾಗಲು ನಿರ್ಧರಿಸಿದ್ದರು. ಆದ್ರೆ ಮಳೆಯಿಂದಾಗಿ ಕಲ್ಯಾಣಮಂಟಪ ಜಲಾವೃತವಾಗಿತ್ತು. ಹೀಗಾಗಿ ಅವರ ಪೋಷಕರು ವಧು-ವರನನ್ನು ಮದುವೆ ಮಂಟಪಕ್ಕೆ ಪ್ರವಾಹದ ನೀರಿನಲ್ಲಿ ದೊಡ್ಡದಾದ ಅಡುಗೆ ಪಾತ್ರೆಯಲ್ಲಿ ಕೂರಿಸಿ ಕರೆತಂದಿದ್ದಾರೆ. 

ದೊಡ್ಡ ಪಾತ್ರೆಯ ಮೂಲಕ ಕಲ್ಯಾಣ ಮಂಟಪಕ್ಕೆ ಬಂದ ಈ ಜೋಡಿ ಇಂದು ಕೆಲವೇ ಬಂಧು-ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದೆ. ಆಲಪ್ಪುಳ ಜಿಲ್ಲೆಯ ನಿವಾಸಿಗಳಾದ ಆಕಾಶ್ ಮತ್ತು ಐಶ್ವರ್ಯ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಇಬ್ಬರು ಚೆಂಗನೂರುವಿನಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com