ಫೈನಾನ್ಸ್ ಸಾಲ ತೀರಿಸಲು 2,000 ರೂ. ಕೊಡದ ಸ್ನೇಹಿತರು, ಸಂಬಂಧಿಕರು: ಮನನೊಂದು ಯುವಕ ಆತ್ಮಹತ್ಯೆ

ಅತಿಯಾದ ಸಾಲದಿಂದ ಸಾಯುವುದನ್ನು ನೋಡಿದ್ದೇವೆ. ಆದರೆ ಸಾಲ ತೀರಿಸಲು ಕೇವಲ 2 ಸಾವಿರ ರೂ. ಹಣವನ್ನು ಯಾರೂ ಕೊಡಲಿಲ್ಲ ಎಂದು ಮನನೊಂದ ಯುವಕ ಇಹಲೋಕವನ್ನೇ ತ್ಯಜಿಸಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೆಡ್ಚಲ್: ಅತಿಯಾದ ಸಾಲದಿಂದ ಸಾಯುವುದನ್ನು ನೋಡಿದ್ದೇವೆ. ಆದರೆ ಸಾಲ ತೀರಿಸಲು ಕೇವಲ 2 ಸಾವಿರ ರೂ. ಹಣವನ್ನು ಯಾರೂ ಕೊಡಲಿಲ್ಲ ಎಂದು ಮನನೊಂದ ಯುವಕ ಇಹಲೋಕವನ್ನೇ ತ್ಯಜಿಸಿದ್ದಾನೆ. ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಶಮೀರ್ಪೇಟೆ ಮಂಡಲದ ಪೊನ್ನಾಲದಲ್ಲಿ ಈ ದುರಂತ ಸಂಭವಿಸಿದೆ.

ಏನಿದು ಘಟನೆ? ಮರ್ಯಾಲ ಆನಂದ್(23) ಸಾವಿಗೀಡಾದವ. ಈತ ತರ್ಕಪಲ್ಲಿಯ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ. 3 ತಿಂಗಳ ಹಿಂದೆ ಸಿದ್ದಿಪೇಟೆ ಜಿಲ್ಲೆಯ ಗಜವೇಲ್ ಮಂಡಲದ ಕುಂಚೇರುಕಲಿ ಮೈಕ್ರೋ ಫೈನಾನ್ಸ್‌ ನಿಂದ 10,000 ರೂ. ಸಾಲ ಪಡೆದಿದ್ದಾನೆ. ಈ ಸಾಲದ ಹಿನ್ನೆಲೆ ಅದರ ಮರುಪಾವತಿಗೆ ಅ.22 ರಂದು ಆನಂದ್ ಮನೆಗೆ ಫೈನಾನ್ಸ್ ನ ಓರ್ವ ಮಹಿಳೆ ಮತ್ತು 5 ಮಂದಿ ಭೇಟಿ ನೀಡಿ ಸಾಲ ಪಾವತಿ ಮಾಡುವಂತೆ ಹೇಳಿದ್ದಾರೆ.

ಈಗ ನನ್ನ ಬಳಿ ಇಲ್ಲ. ಆದಷ್ಟು ಬೇಗ ಕಟ್ಟುತ್ತೇನೆ ಎಂದು ಹೇಳಿದ್ದಾನೆ. ಆದರೆ ಅವರು ಈಗಲೇ ಕಟ್ಟುವಂತೆ ಪಟ್ಟು ಹಿಡಿದಿದ್ದಾರೆ. ಇದರಿಂದ ಆನಂದ್ ಕೆಲ ಸ್ನೇಹಿತರು ಮತ್ತು ಸಂಬಂಧಿಕರ ಬಳಿ ಹಣ ಕೇಳಿದ್ದಾನೆ. ಆದರೆ ಯಾರು ಕೊಡಲು ಮುಂದಾಗದ ಕಾರಣ ಆನಂದ್ 2 ಸಾವಿರ ರೂಪಾಯಿಗೆ ನನ್ನನ್ನು ಯಾರು ನಂಬುತ್ತಿಲ್ಲವಲ್ಲ ಎಂದು ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com