ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‌ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್

ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್
Updated on

ನವದೆಹಲಿ: ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಈ ಕುರಿತಂತೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅನಿಲ್ ವಿಜ್, ನಮ್ಮ ಸ್ವಂತ ಮನೆಯಲ್ಲೂ ದೇಶದ್ರೋಹಿಗಳು ಅಡಗಿರುವುದರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದಿದ್ದಾರೆ. 

ಪಾಕಿಸ್ತಾನ ಗೆದಿದ್ದಕ್ಕಾಗಿ ಕಾಶ್ಮೀರದಲ್ಲಿ ಸಂಭ್ರಮಾಚರಣೆ ಕುರಿತ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ಮುಖಂಡ ಅನಿಲ್ ವಿಜ್ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ದುಬೈನಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಭಾರತ ವಿರುದ್ಧ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com