ಸಮಯ ಬಂದಾಗ ರೈತರು ಬಿಜೆಪಿಗೆ ಪಾಠ ಕಲಿಸುತ್ತಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಮಯ ಬಂದಾಗ ದೇಶದ ರೈತರು ಕೇಸರಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್
Updated on

ಜೈಪುರ: ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಮಯ ಬಂದಾಗ ದೇಶದ ರೈತರು ಕೇಸರಿ ಪಕ್ಷಕ್ಕೆ ಪಾಠ ಕಲಿಸುತ್ತಾರೆ ಎಂದು ಭಾನುವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 'ಕಿಸಾನ್ ಮಹಾಪಂಚಾಯತ್' ನಲ್ಲಿ ನೆರೆದಿದ್ದ ಜನಸಮೂಹ ಬಿಜೆಪಿಯಿಂದ ಬೇಸತ್ತಿದೆ ಎಂದು ರಾಜಸ್ಥಾನ ಸಿಎಂ ಹೇಳಿದ್ದಾರೆ.

ಮುಜಫರ್‌ನಗರದ ಮಹಾಪಂಚಾಯತ್‌ನಲ್ಲಿ ಭಾನುವಾರ ಸಾವಿರಾರು ರೈತರು ಜಮಾಯಿಸಿದರು. ಅಲ್ಲಿ ಬಿಕೆಯು ನಾಯಕ ರಾಕೇಶ್ ಟಿಕೈತ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರನ್ನು "ಗಲಭೆಕೋರರು" ಎಂದು ಕರೆದರು ಮತ್ತು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಸೋಲಿಸಬೇಕು ಎಂದು ಕರೆ ನೀಡಿದರು.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM) ಈ ಕಾರ್ಯಕ್ರಮವನ್ನು ಆಯೋಜಿಸಿದೆ. 

ರಾಜಸ್ಥಾನದ ಆರು ಜಿಲ್ಲೆಗಳ ಪಂಚಾಯತ್ ಚುನಾವಣೆ ಫಲಿತಾಂಶಗಳನ್ನು ಉಲ್ಲೇಖಿಸಿ, ಗೆಹ್ಲೋಟ್ ಅವರು ಬಿಜೆಪಿ ವಿರುದ್ಧ ಜನರಿಗೆ ಸಾಕಷ್ಟು ಅಸಮಾಧಾನವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com