ಚತ್ತೀಸ್ ಗಢ ಕ್ರೈಸ್ತ ಪಾದ್ರಿ ಮೇಲೆ ಬಲಪಂಥೀಯರ ದಾಳಿ: ಮತಾಂತರ ನಡೆಸುತ್ತಿದ್ದ ಆರೋಪ

ಮತಾಂತರ ಆರೋಪ  ಸಂಬಂಧ ಪೊಲಿಸರು ಹರೀಶ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು. ಪೊಲೀಸ್ ಠಾಣೆಯಲ್ಲಿ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಪಾದ್ರಿ ಮೇಲೆ ದಾಳಿ ನಡೆಸಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಯ್ಪುರ: ಮತಾಂತರ ನಡೆಸುತ್ತಿದ್ದ ಅನುಮಾನದ ಮೇರೆಗೆ ಬಲಪಂಥೀಯರ ಗುಂಪೊಂದು ಕ್ರೈಸ್ತ ಪಾದ್ರಿ ಮೇಲೆ ದಾಳಿ ನಡೆಸಿರುವ ಘಟನೆ ರಾಯ್ಪುರದಲ್ಲಿ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಈ ದಾಳಿ ನಡೆದಿರುವುದು ಅಚ್ಚರಿ. 

ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಹರೀಶ್ ಸಾಹು ಎಂಬ ಪಾದ್ರಿಯ ಮೇಲೆ ಮತಾಂತರ ಆರೋಪ ಹೊರಿಸಿ ಪೊಲೀಸ್ ದೂರು ನೀಡಿದ್ದರು. ಈ ಸಂಬಂಧ ಪೊಲಿಸರು ಹರೀಶ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು. 

ಈ ಸಂದರ್ಭ ಅಲ್ಲಿಯೇ ಇದ್ದ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಪಾದ್ರಿ ಮೇಲೆ ದಾಳಿ ನಡೆಸಿದ್ದರು. ದಾಳಿ ಸಂದರ್ಭ ಪಾದ್ರಿ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಕ್ರೈಸ್ತ ಪಾದ್ರಿ ಮೇಲೆ ದಾಳಿ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com