ಪಾಕಿಸ್ತಾನದಿಂದ ಶಹಬ್ಬಾಸ್ ಗಿರಿ ಪಡೆದುಕೊಳ್ಳಬೇಕಾ?: ರೈತ ನಾಯಕರಿಗೆ ಕೇಂದ್ರ ಸಚಿವ ಸಂಜೀವ್ ಬಾಲಿಯಾನ್ ಪ್ರಶ್ನೆ

ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ರೈತ ನಾಯಕರು ಪಾಕಿಸ್ತಾನವನ್ನು ಮೆಚ್ಚಿಸುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಸಚಿವರು ಮಾತನಾಡಿರುವುದಕ್ಕೆ ಆಕ್ಷೇಪ ಕೇಳಿಬಂದಿದೆ.
ಕೇಂದ್ರ ಸಚಿವ ಸಂಜೀವ್ ಬಾಲಿಯಾನ್
ಕೇಂದ್ರ ಸಚಿವ ಸಂಜೀವ್ ಬಾಲಿಯಾನ್
Updated on

ನವದೆಹಲಿ: ಕೇಂದ್ರದ ನೂತನ ಕೃಷಿ ಕಾನೂನು ವಿರೋಧಿಸಿ ಭಾನುವಾರ ನಡೆದ ರೈತರ ಕಿಸಾನ್ ಮಹಾಪಂಚಾಯತ್ ಸಭೆಯನ್ನು ರಾಜಕೀಯ ಸಮಾವೇಶ ಎಂದು ಕೇಂದ್ರ ಸಚಿವ ಸಂಜೀವ್ ಬಾಲಿಯಾನ್ ಟೀಕೆ ಮಾಡಿದ್ದಾರೆ. 

ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ ಅನ್ನು ಸಂಯುಕ್ತ ಕಿಸಾನ್ ಮೋರ್ಚಾ ಆಯೋಜನೆ ಮಾಡಿತ್ತು. ಈ ಬಗ್ಗೆ ಟೀಕೆ ಮಾಡಿರುವ ಸಂಜೀವ್ ಬಾಲಿಯಾನ್ ಕಿಸಾನ್ ಪಂಚಾಯತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರೈತ ನಾಯಕರನ್ನು ಕುರಿತು, ನಿಮಗೆ ಪಾಕಿಸ್ತಾನದಿಂದ ಶಹಬ್ಬಾಸ್ ಗಿರಿ ಪಡೆದುಕೊಳ್ಳಬೇಕಾ ಎಂದು ಪ್ರಶ್ನೆ ಹಾಕಿದ್ದಾರೆ. 

ಸಂಜೀವ್ ಬಾಲಿಯಾನ್ ಅವರು ಮುಜಾಫರ್ ನಗರದ ಸಂಸದರಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ರೈತರು ಪಾಕಿಸ್ತಾನವನ್ನು ಮೆಚ್ಚಿಸುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಸಚಿವರು ಮಾತನಾಡಿರುವುದಕ್ಕೆ ಆಕ್ಷೇಪ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com