ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ
ಮುಂಬೈ: ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಜಾವೇದ್ ಅಖ್ತರ್ ಹೇಳಿಕೆಗೆ ಕಿಡಿ ಕಾರಿದ್ದರು. ಆರೆಸ್ಸೆಸ್ ಅನ್ನು ತಾಲಿಬಾನ್ ಮನೋಧರ್ಮಕ್ಕೆ ಹೋಲಿಸುವವರು ಮೊದಲು ಆ ವಿಚಾರವನ್ನು ಸ್ಥೂಲವಾಗಿ ಪರಾಮರ್ಶಿಸಬೇಕು ಎಂದು ಶಿವಸೇನಾ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚಿಗೆ ಪತ್ರಿಕಾ ಸಂದರ್ಶನವೊಂದರಲ್ಲಿ ಬಾಲಿವುಡ್ ಗೀತ ರಚನೆಕಾರ, ಸಾಹಿತಿ ಜಾವೆದ್ ಅಖ್ತರ್ ಅವರು ಆರೆಸ್ಸೆಸ್, ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳವನ್ನು ತಾಲಿಬಾನಿಗೆ ಹೋಲಿಸಿ ಮಾತನಾಡಿದ್ದರು. ತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಅವರು ಹೇಳಿಕೆ ನೀಡಿದ್ದರು.
ಜಾವೆದ್ ಅಖ್ತರ್ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಜಾವೆದ್ ಅಖ್ತರ್ ಹಾಗೂ ಅವರ ಕುಟುಂಬಸ್ಥರು ಮಾಡುವ ಸಿನಿಮಾಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹೇರುವುದಾಗಿ ಹಲವು ಬಲಪಂಥೀಯ ನಾಯಕರು ಎಚ್ಚರಿಕೆ ನೀಡಿದ್ದರು.
Related Article
ತಾಲಿಬಾನ್ ವಶವಾದ ನಂತರ ಅಫ್ಘಾನಿಸ್ತಾನಕ್ಕೆ ಭಾರತದ ಸಕ್ಕರೆ ರಫ್ತು ಸಂಪೂರ್ಣ ಸ್ಥಗಿತ
ತಾಲಿಬಾನ್ ಪರ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಭಾರತ ಅಫ್ಘಾನಿಸ್ತಾನದಲ್ಲಿ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನ ತಾಲಿಬಾನ್ ವಶವಾಗುತ್ತಿದ್ದಂತೆಯೇ ಕಾಶ್ಮೀರದಲ್ಲಿ ಹಿಂಸಾಚಾರ ಉಗ್ರರ ಚಟುವಟಿಕೆ ಏರಿಕೆ!
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ