ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲ ಖಂಡನೆ

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 
ಬಿಜೆಪಿ ಸಂಸದ ಅರ್ಜುನ್ ಸಿಂಗ್ 
ಬಿಜೆಪಿ ಸಂಸದ ಅರ್ಜುನ್ ಸಿಂಗ್ 
Updated on

ನವದೆಹಲಿ: ಬುಧವಾರ ರಾಜ್ಯದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲರ ಖಂಡನೆ ಅವರ ನಿವಾಸದ ಎದುರು ಸಂಭವಿಸಿದ ಸ್ಫೋಟ ಪ್ರಕರಣವನ್ನು ರಾಜ್ಯಪಾಲ ಜಗ್ ದೀಪ್ ಧನ್ಕರ್ ತೀವ್ರವಾಗಿ ಖಂಡಿಸಿದ್ದಾರೆ. 

ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗನೆ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ರಾಜ್ಯಪಾಲರು ಪೊಲೀಸರಿಗೆ ಸೂಚಿಸಿದ್ದಾರೆ. 

ರಾಜ್ಯದ 24 ನಾರ್ಥ್ ಪರಗಣ ಜಿಲ್ಲೆಯಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬುಧವಾರ ಬೆಳಿಗ್ಗೆ ೬.೩೦ರ ಸುಮಾರಿಗೆ ಕಚ್ಛಾ ಬಾಂಬುಗಳನ್ನು ಸ್ಫೋಟಿಸಲಾಗಿತ್ತು. 

ಒಟ್ಟು ಮೂರು ಬಾಂಬುಗಳು ಸ್ಫೋಟಗೊಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com