ಸಾಂದರ್ಭಿಕ ಚಿತ್ರ
ದೇಶ
ಕಾಶ್ಮೀರ: ಶ್ರೀನಗರದ ಖನ್ಯಾರ್ ನಲ್ಲಿ ಉಗ್ರರ ದಾಳಿ, ಪೊಲೀಸ್ ಅಧಿಕಾರಿಗೆ ಗಾಯ
ನಗರದ ಖನ್ಯಾರ್ ಪ್ರದೇಶದಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ನಗರದ ಖನ್ಯಾರ್ ಪ್ರದೇಶದಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಇಂದು ಮಧ್ಯಾಹ್ನ 1: 35 ರ ಸುಮಾರಿಗೆ ಖನ್ಯಾರ್ನಲ್ಲಿ ಭಯೋತ್ಪಾದಕರು ಪೋಲಿಸ್ ನಾಕಾ ಪಾರ್ಟಿಯ ಮೇಲೆ ಗುಂಡು ಹಾರಿಸಿದರು. ದಾಳಿಯಲ್ಲಿ ಖನ್ಯಾರ್ನ ಪಿಎಸ್ಐ(ಪ್ರೊಬೇಷನರಿ ಸಬ್ ಇನ್ಸ್ಪೆಕ್ಟರ್) ಅರ್ಷಿದ್ ಅಹ್ಮದ್ ಅವರು ಗಾಯಗೊಂಡಿದ್ದಾರೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗಾಯಗೊಂಡ ಅಧಿಕಾರಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಎಸ್ಎಮ್ಎಚ್ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭದ್ರತಾ ಪಡೆ ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ ಮತ್ತು ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ