ಮಹಾರಾಷ್ಟ್ರ ದೋಣಿ ದುರಂತ: 7 ಮಂದಿ ಮೃತದೇಹ ಪತ್ತೆ, ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ 13 ಮಂದಿಯಿಂದ ದೋಣಿಯೊಂದು ಮುಳುಗಿತ್ತು. ಘಟನೆ ವೇಳೆ ಇಬ್ಬರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು. 

ಘಟನೆ ಬಳಿಕ ಪೋಲಿಸ್ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡಗಳು ಕಾರ್ಯಾಚರಣೆ ನಡೆಸಿ ಮೂರು ಮೃತದೇಹಗಳನ್ನು ಹೊರತೆಗೆದಿದ್ದರು. ಉಳಿದವರಿಗಾಗಿ ಕಾರ್ಯಾಚರಣೆ ಮುಂದುವರೆದಿತ್ತು. ಇದರಂತೆ ಇಂದು  7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, 11 ವರ್ಷದ ಬಾಲಕಿ ಇನ್ನೂ ಪತ್ತೆಯಾಗಿಲ್ಲ. 

ಘಟನೆಯಲ್ಲಿ ಮೃತಪಟ್ಟಿರುವ 10 ಮಂದಿಯಲ್ಲಿ 7 ಮಂದಿ ಮಹಿಳೆಯರಾಗಿದ್ದು, ಮೂವರು ಪುರುಷರಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ 10: 30 ರ ಸುಮಾರಿಗೆ ಈ ಘಟನೆ ನಡೆದಿತ್ತು. ಮೂರು ಕುಟುಂಬಗಳ 13 ಜನರನ್ನು ಹೊತ್ತ ದೋಣಿ ನದಿಯಲ್ಲಿ ಮಗುಚಿ ಬಿದ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com