ನರೇಂದ್ರ ಮೋದಿ
ನರೇಂದ್ರ ಮೋದಿ

‘ಕುದುರೆಯನ್ನು ನೀರಿನ ಬಳಿ ಕರೆದುಕೊಂಡು ಹೋಗಬಹುದು, ನೀರು ಕುಡಿಯುವಂತೆ ಮಾಡುವುದು ಹೇಗೆ?’: ಮೋದಿಗೆ ಸ್ವಾಮಿ ಠಕ್ಕರ್!

ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ನವದೆಹಲಿ: ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಸ್ತುತ ಆರ್ಥಿಕ ಅವ್ಯವಸ್ಥೆ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡುವಂತೆ ಕೋರಿ ಇತ್ತೀಚಿನದಿನಗಳಲ್ಲಿ ನನಗೆ ಅನೇಕ ದೂರವಾಣಿ ಕರೆಗಳು ಬರುತ್ತಿವೆ.  

ಅಂಗಡಿ ಮಾಲೀಕರಿಂದಲೂ ಕರೆ ಮಾಡುತ್ತಿದ್ದಾರೆ, ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು.
ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ  ಎಂದು ಅವರೆಲ್ಲರ ಬಳಿ ನಾನು ಪ್ರಶ್ನಿಸುತ್ತೇನೆ ಎಂದು ಟಾಂಗ್ ನೀಡಿದ್ದಾರೆ. ಆರ್ಥಿಕತೆಗೆ ಸಂಬಂಧಿಸಿ ಮೋದಿಯವರಿಗೆ 12ಪತ್ರಗಳನ್ನು ಬರೆದಿದ್ದೇನೆ. ಅವರು ಅವುಗಳನ್ನು ಸ್ವೀಕರಿಸಿದ್ದಾರೆಯೇ ವಿನಃ ಕ್ರಮ ಕೈಗೊಂಡಿಲ್ಲ’ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com