'ಅಲ್ಪ ಉಡುಗೆ ತೊಡುವವರು ಶ್ರೇಷ್ಠರಾಗುತ್ತಾರೆಂದಾದರೆ ರಾಖಿ ಸಾವಂತ್, ಮಹಾತ್ಮ ಗಾಂಧೀಜಿಗಿಂತ ದೊಡ್ಡವರಾಗುತ್ತಿದ್ದರು!'

ಕಡಿಮೆ ಬಟ್ಟೆ ಧರಿಸುವವರು ಹೆಚ್ಚು ಶ್ರೇಷ್ಟರಾಗುತ್ತಾರೆ ಎಂದಾಗಿದ್ದರೇ ನಟಿ ರಾಖಿ ಸಾವಂತ್ ಅವರು ಮಹಾತ್ಮ ಗಾಂಧಿಗಿಂತಲೂ ದೊಡ್ಡವರಾಗುತ್ತಿದ್ದರು' ಎಂದು ಉತ್ತರ ಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ಹೇಳಿದ್ದಾರೆ.
ಹೃದಯ ನಾರಾಯಣ್ ದೀಕ್ಷಿತ್
ಹೃದಯ ನಾರಾಯಣ್ ದೀಕ್ಷಿತ್
Updated on

ಲಕ್ನೋ: ಕಡಿಮೆ ಬಟ್ಟೆ ಧರಿಸುವವರು ಹೆಚ್ಚು ಶ್ರೇಷ್ಟರಾಗುತ್ತಾರೆ ಎಂದಾಗಿದ್ದರೇ ನಟಿ ರಾಖಿ ಸಾವಂತ್ ಅವರು ಮಹಾತ್ಮ ಗಾಂಧಿಗಿಂತಲೂ ದೊಡ್ಡವರಾಗುತ್ತಿದ್ದರು' ಎಂದು ಉತ್ತರ ಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ಹೇಳಿದ್ದಾರೆ. 

ಉನ್ನಾವೋ ಜಿಲ್ಲೆಯ ಬಂಗರ್ಮೌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಬಿಜೆಪಿಯ 'ಪ್ರಬುದ್ಧ ಸಮ್ಮೇಳನ'ದಲ್ಲಿ ಸ್ಪೀಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ಯಾವುದೇ ವಿಷಯದ ಕುರಿತು ಪುಸ್ತಕ ಬರೆಯುವ ಮೂಲಕ ಯಾರೂ ಬುದ್ಧಿಜೀವಿಗಳಾಗಿಲ್ಲ ಎಂಬುದು ನನ್ನ ಅಭಿಪ್ರಾಯ. ಆದರೂ, ಈ ವರೆಗೆ ನಾನು ಕನಿಷ್ಠ 6,000 ಪುಸ್ತಕಗಳನ್ನು ಓದಿದ್ದೇನೆ' ಎಂದು ದೀಕ್ಷಿತ್ ಹೇಳಿದರು.

'ಗಾಂಧೀಜಿ ಅಲ್ಪ ಉಡುಗೆ ಧರಿಸುತ್ತಿದ್ದರು. ಅವರು ಕೇವಲ ಧೋತಿ ಕಟ್ಟುತ್ತಿದ್ದರು. ದೇಶವು ಅವರನ್ನು ಬಾಪು ಎಂದು ಕರೆಯಿತು. ಯಾರಾದರೂ ತಮ್ಮ ಬಟ್ಟೆಗಳನ್ನು ಕಡಿಮೆ ಮಾಡಿದರೆ ಶ್ರೇಷ್ಠರಾಗಲು ಸಾಧ್ಯವಾದರೆ, ರಾಖಿ ಸಾವಂತ್ ಮಹಾತ್ಮ ಗಾಂಧಿಗಿಂತ ದೊಡ್ಡವರಾಗುತ್ತಿದ್ದರು' ಎಂದು ತಿಳಿಸಿದ್ದಾರೆ.

ಭಾಷಣದ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಅವರು ಹಿಂದಿಯಲ್ಲಿ ಸ್ಪಷ್ಟೀಕರಣ ನೀಡುವ ಟ್ವೀಟ್‌ಗಳನ್ನು ಮಾಡಿದ್ದಾರೆ. 'ಸಾಮಾಜಿಕ ಮಾಧ್ಯಮದಲ್ಲಿರುವ ಕೆಲವು ಸ್ನೇಹಿತರು ನನ್ನ ಭಾಷಣದ ವಿಡಿಯೋದ ಕ್ಲಿಪ್ ಅನ್ನು ಬೇರೆ ಅರ್ಥದಲ್ಲಿ ತೋರಿಸುತ್ತಿದ್ದಾರೆ.

ಇದು ಉನ್ನಾವೋದಲ್ಲಿ ನಡೆದ 'ಪ್ರಬುದ್ಧ ಸಮ್ಮೇಳನ'ದಲ್ಲಿ ನನ್ನ ಭಾಷಣದ ಭಾಗವಾಗಿತ್ತು, ಇದರಲ್ಲಿ ಸಮ್ಮೇಳನದ ಸಂಚಾಲಕರು ನನ್ನನ್ನು 'ನಾನು ಪ್ರಬುದ್ಧ ಬರಹಗಾರ' ಎಂದು ಪರಿಚಯಿಸಿದರು' ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com