ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
6 ರಾಷ್ಟ್ರೀಯ ರೈಫಲ್ಸ್ನ ಯೋಧ ಲೋಕೀಂದರ್ ಸಿಂಗ್ ಅವರು ಬುಧವಾರ ರಾತ್ರಿ 10.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಕೆರನ್ ಸೆಕ್ಟರ್ನಲ್ಲಿರುವ ಕ್ಯಾಂಪ್ನಲ್ಲಿ ತಮ್ಮ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಂಗ್ ಅವರನ್ನು ತಕ್ಷಣ ಹತ್ತಿರದ ಮಿಲಿಟರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದರೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಯೋಧ ಏಕೆ ಇಂತಹ ಕಠಿಣ ನಿರ್ಧಾರ ತೆಗೆದುಕೊಂಡರು ಎಂಬುದು ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Advertisement