ತ್ರಿಪುರ ಗಡಿಯಲ್ಲಿ ಸಂಬಂಧಿಗಳ ಘರ್ಷಣೆ: ಇಬ್ಬರು ಬಿಎಸ್ ಎಫ್ ಯೋಧರು ಸಾವು; ಪೋಸ್ಟ್ ಕಮಾಂಡರ್ ಗೆ ಗಾಯ

ತ್ರಿಪುರ ಬಳಿ ಬಾಂಗ್ಲಾ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಸಂಬಂಧಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದರು, ಹಿರಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಅಗರ್ತಲಾ: ತ್ರಿಪುರ ಬಳಿ ಬಾಂಗ್ಲಾ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಸಂಬಂಧಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದರು, ಹಿರಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಮತಿ ಜಿಲ್ಲೆಯ ಕಾರ್ಬುಕ್ ಉಪವಿಭಾಗದಲ್ಲಿರುವ ಖಗ್ರಾಚೇರಿ ಪೋಸ್ಟ್ ಗಡಿಯ ಬೇಲಿ ಗೇಟ್ ಬಳಿ ಗುರುವಾರ ಸಂಜೆ ಈ ಘಟನೆ ನಡೆದಿದೆ.

20 ನೇ ಬೆಟಾಲಿಯನ್‌ಗೆ ಸೇರಿದ ಹೆಡ್ ಕಾನ್ಸ್‌ಟೇಬಲ್ ಸತ್ಬೀರ್ ಸಿಂಗ್ ಮತ್ತು ಕಾನ್ಸ್‌ಟೇಬಲ್ ಪ್ರತಾಪ ಸಿಂಹ ನಡುವೆ ನಡೆದ ಜಗಳದ ವೇಳೆ ಸಂಭವಿಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗರ್ತಲಾದ ಪ್ರಧಾನ ಕಚೇರಿಯ ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

ಸತಾಬೀರ್ ಸಿಂಗ್ ಮೇಲೆ ಪ್ರತಾಪ್ ಸಿಂಹ ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೋಸ್ಟ್ ನಲ್ಲಿ ನಿಯೋಜಿಸಲಾಗಿದ್ದ ಸೆಂಟ್ರಿ  ಪ್ರತಾಪ್ ಸಿಂಹನನ್ನು ಕೊಂದಿದ್ದಾನೆ ಎಂದು ಅವರು ಹೇಳಿದರು.

ಕಾನ್ಸ್‌ಟೇಬಲ್ ಪ್ರತಾಪ ಸಿಂಹ, ಪೋಸ್ಟ್ ಕಮಾಂಡರ್ ಸಬ್ ಇನ್ಸ್‌ಪೆಕ್ಟರ್ ರಾಮ್ ಕುಮಾರ್ ಅವರ ಮೇಲೆ  ಗುಂಡು ಹಾರಿಸಿದ್ದರಿಂದ ಅವರ ಎರಡು ಕಾಲುಗಳು ಗಾಯಗೊಂಡಿವೆ ಎಂದು ಹೇಳಲಾಗಿದೆ. ಘಟನೆಗೆ ನಿಜವಾದ ಕಾರಣವನ್ನು ಕಂಡುಹಿಡಿಯಲು ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಸಿಲಾಚೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com