ಕಾಂಗ್ರೆಸ್ ಬಿಕ್ಕಟ್ಟಿಗೆ ಮೂವರು ಗಾಂಧಿಗಳು ಹೊಣೆ: ನಟ್ವರ್ ಸಿಂಗ್

ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿಗೆ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಹೊಣೆಗಾರರು ಎಂದು ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ಹೇಳಿದ್ದಾರೆ.
ಪ್ರಿಯಾಂಕಾ, ರಾಹುಲ್, ಸೋನಿಯಾ ಗಾಂಧಿ
ಪ್ರಿಯಾಂಕಾ, ರಾಹುಲ್, ಸೋನಿಯಾ ಗಾಂಧಿ
Updated on

ನವದೆಹಲಿ: ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರೂ ಅದರ ವಿರುದ್ಧ ವಾಗ್ದಾಳಿಯನ್ನು ನಿಲ್ಲಿಸಿಲ್ಲ. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿಗೆ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಹೊಣೆಗಾರರು ಎಂದಿದ್ದಾರೆ. ರಾಹುಲ್ ಗಾಂಧಿ ಯಾವುದೇ ಸ್ಥಾನ ಹೊಂದದಿದ್ದರೂ ಪಕ್ಷಕ್ಕೆ ದೊಡ್ಡ ಹೊಡೆತ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪಕ್ಷಕ್ಕೆ ಹೊಡೆತ ನೀಡುತ್ತಿರುವವರು ಯಾರು? ಗುಲಾಂ ನಬಿ ಅಜಾದ್ ಅಲ್ಲ, ಎಕೆ ಆ್ಯಂಟನಿ ಅಲ್ಲ, ಕಾರ್ಯಕಾರಿ ಸಮಿತಿಯಲ್ಲಿ ಯಾರು ಇಲ್ಲ, ಮೂವರು ಗಾಂಧಿಗಳು ಹೊಡೆತ ನೀಡುತ್ತಿದ್ದಾರೆ ಎಂದು ಸಿಎಎನ್ ನ್ಯೂಸ್ 18 ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಪಕ್ಷದಲ್ಲಿ ಬದಲಾವಣೆಗೆ ಈ ಗಾಂಧಿಗಳು ಅವಕಾಶ ನೀಡುತ್ತಿಲ್ಲ. ಬೇರೆಯವರಿಗೆ ಅವಕಾಶ ನೀಡುತ್ತಿಲ್ಲ, ರಾಹುಲ್ ಗಾಂಧಿ 2002ರಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಗಿನಿಂದಲೂ ಸಂಸದರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿದೆ. ಇನ್ನೂ ಪ್ರಿಯಾಂಕಾ ರಾಹುಲ್ ಗಿಂತ ಸ್ವಲ್ಪ ಚಿಕ್ಕವರು. ಆದರೆ, ಅವರು ಯವಕರಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಯುವಕರ ಅಗತ್ಯವಿದೆ ಎಂದು ಅವರು ಹೇಳಿದರು. 

ಪಂಜಾಬಿನಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ್ವರ್ ಸಿಂಗ್, ಇದು ನಿಜವಾಗಿಯೂ ಆಘಾತಕಾರಿ, ಅವರು ದೇಶದ ಹಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಒಂಬತ್ತೂವರೆ ವರ್ಷಗಳ ಕಾಲ ಸಿಎಂ ಆಗಿ, ಒಳ್ಳೆಯ ಕೆಲಸಗಳನ್ನು ಮಾಡಿದ್ದರು. ಆದರೆ, ಯಾವುದೇ ವಿವರಣೆ ಕೇಳದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಲಿದೆ. ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂದು ಪ್ರಶ್ನಿಸಿದರು. ಸಿಧು ಅತ್ಯುತ್ತಮ ಕ್ರಿಕೆಟಿಗರು, ಅವರು ಕ್ರಿಕೆಟ್ ಗೆ ಮರಳುವುದು ಸೂಕ್ತ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com