ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.
ಪಶ್ಚಿಮ ಬಂಗಾಳ ಎಐಸಿಸಿ ಉಸ್ತುವಾರಿಯಾಗಿದ್ದ ಜಿತಿನ್ ಪ್ರಸಾದ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಜವಾಬ್ದಾರಿಯನ್ನು ಬಿಕೆ ಹರಿಪ್ರಸಾದ್ ಅವರಿಗೆ ನೀಡಲಾಗುತ್ತಿದೆ.
ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದ್ದ ಜಿತಿನ್ ಪ್ರಸಾದ ಅವರಿಗೆ ಈ ವಾರದ ಆರಂಭದಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದಾರೆ.
"ಎಐಸಿಸಿ ಉಸ್ತುವಾರಿ ಜಿತಿನ್ ಪ್ರಸಾದ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅವರ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತಿದ್ದೇನೆ" ಎಂದು ಬಿ.ಕೆ. ಹರಿಪ್ರಸಾದ್ ಅವರು ಕೋಲ್ಕತ್ತಾದಿಂದ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.
Advertisement