ಮುಂಬೈ: ಭ್ರಷ್ಟಾಚಾರ ಆರೋಪದ ಮೇಲೆ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಗೆ ಸಿಬಿಐ ಸಮನ್ಸ್ ನೀಡಿದೆ.
ಭ್ರಷ್ಟಾಚಾರ ಆರೋಪದ ಮೇಲೆ ಅನಿಲ್ ದೇಶ್ಮುಖ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ಸಿಬಿಐ ಇದೇ ಏಪ್ರಿಲ್ 14ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ಅನಿಲ್ ದೇಶ್ಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದರು. ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿಯನ್ನು ತಮಗೆ ಬೇಕಾದ ಪೊಲೀಸ್ ಅಧಿಕಾರಿಗಳಿಗೆ ವಸೂಲಿ ಮಾಡಿಸುತ್ತಿದ್ದರು ಎಂಬ ಗಂಭೀರ ಆರೋಪ ಮಾಡಿದ್ದರು.
ಈ ಪ್ರಕರಣ ಸಂಬಂಧ ಸಿಬಿಐ ತನಿಖೆ ಆರಂಭಿಸಿದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
Advertisement