ಬೈಪಾಸ್‌ ಶಸ್ತ್ರ ಚಿಕಿತ್ಸೆ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್

ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.
ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದರು
ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದರು

ನವದೆಹಲಿ: ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಹೃದಯ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ್ದಾರೆ. ಈ ಸಂಬಂಧ ಕೋವಿಂದ್‌ ಸೋಮವಾರ ಟ್ವೀಟ್‌ ಮಾಡಿದ್ದು, 'ಶಸ್ತ್ರ ಚಿಕಿತ್ಸೆಯ ನಂತರ ಆರೋಗ್ಯವಾಗಿ ರಾಷ್ಟ್ರಪತಿ ಭವನಕ್ಕೆ ಹಿಂದಿರುಗಿದ್ದೇನೆ"ಎಂದು ಹೇಳಿದ್ದಾರೆ.

ನಿಮ್ಮೆಲ್ಲರ ಪ್ರಾರ್ಥನೆಗಳಿಂದಾಗಿ ಮತ್ತೆ ಆರೋಗ್ಯವಂತನಾಗಿದ್ದೇನೆ. ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಯ ಆರೈಕೆಯಿಂದ ತ್ವರಿತವಾಗಿ ಚೇತರಿಸಿಕೊಂಡಿದ್ದೇನೆ. ಎಲ್ಲರಿಗೂ ಕೃತಜ್ಞತೆಗಳು. ಮನೆಗೆ ಹಿಂದಿರುಗಿರುವುದಕ್ಕೆ ಸಂತೋಷವಾಗಿದೆ ಎಂದು ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com