ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ

ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 
ಕೋವಿಡ್-19 ರೋಗಿಗಳಿಗಾಗಿ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ
ಕೋವಿಡ್-19 ರೋಗಿಗಳಿಗಾಗಿ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ
Updated on

ನವದೆಹಲಿ: ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 

ಕೊರೋನಾ 2ನೇ ಅಲೆ ದೇಶವನ್ನು ತೀವ್ರವಾಗಿ ಬಾಧಿಸುತ್ತಿದ್ದು, ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಜನಕದ ಅಗತ್ಯವಿದೆ.  ಈ ಹಿನ್ನೆಲೆಯಲ್ಲಿ ನಿರ್ದಿಷ್ಟ 9 ಕೈಗಾರಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಕೈಗಾರಿಕೆಗಳಿಗೂ ಕೇಂದ್ರ ಸರ್ಕಾರ ಆಮ್ಲಜನಕ ಪೂರೈಕೆಯನ್ನು ಸ್ಥಗಿತಗೊಳಿಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ನೇತೃತ್ವದ ಎಂಪರ್ವರ್ಡ್ ಗ್ರೂಪ್-II, ಈ ಆದೇಶ ಹೊರಡಿಸಿದ್ದು, ಗುರುವಾರದಿಂದ ಈ ನಿಯಮ ಜಾರಿಗೊಳ್ಳಲಿದೆ. ಇದೇ ವೇಳೆ ರೈಲ್ವೆ ಪರ್ಯಾಯವಾಗಿ ಆಕ್ಸಿಜನ್ ಎಕ್ಸ್ ಪ್ರೆಸ್ ನ್ನು ಪ್ರಾರಂಭಿಸಲಿದೆ. ಈ ನಡುವೆ ದೆಹಲಿಯಲ್ಲಿ ಆರೋಗ್ಯ ಬಿಕ್ಕಟ್ಟು ಉಂಟಾಗಿದ್ದು 100 ಐಸಿಯು ಬೆಡ್ ಗಳಷ್ಟೇ ಲಭ್ಯವಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com