ಶಬ್ದಬ್ರಹ್ಮ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನ: ಪ್ರಧಾನಿ ಮೋದಿ ಕಂಬನಿ

ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಸಮೃದ್ಧ ಬರಹಗಾರ ಮತ್ತು ಚಿಂತಕರಾಗಿದ್ದರು, ಕನ್ನಡ ಭಾಷೆ, ಸಾಹಿತ್ಯವನ್ನು ಜನಪ್ರಿಯಗೊಳಿಸಲು ಅವರು ಮಾಡಿದ್ದ ಕೆಲಸ ಅಪರಿಮಿತ.. ಕೆಲಸದ ಬಗ್ಗೆ ಅಪಾರ ಒಲವು ಹೊಂದಿದ್ದ ಅವರು ಯುವಜನತೆಗೆ ಪ್ರೇರಣೆಯಾಗಿದ್ದರು. ಅವರ ನಿಧನ ಸಂದರ್ಭದಲ್ಲಿ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com