ನವದೆಹಲಿ: ಕೊರೋನಾ ಪರಿಸ್ಥಿತಿ ಕುರಿತು ಭಾಷಣಗಳನ್ನು ಮಾಡುವ ಬದಲು ದೇಶದ ಜನತೆಗೆ ಪರಿಹಾರವನ್ನು ನೀಡಲಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಕೊರೋನಾ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನು ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಬೇಸರ ತರಿಸುವ ಸುದ್ದಿಗಳು ಬರುತ್ತಲೇ ಇವೆ. ಭಾರತದಲ್ಲಿ ಇಂದು ಕೊರೋನಾದಿಂದ ಬಿಕ್ಕಟ್ಟು ಎದುರಾಗಿಲ್ಲ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದಾಗಿ ಎದುರಾಗಿದೆ. ಕೇಂದ್ರ ಸರ್ಕಾರ ಟೊಳ್ಳು ಭಾಷಣ ಮಾಡುವ ಬದಲು ಕೊರೋನಾಗೆ ಪರಿಹಾರವನ್ನು ನೀಡಲಿ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಹುಲ್ ಗಾಂಧಿಯವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಪ್ರಸ್ತುತ ಹೋಂ ಕ್ವಾರಂಟೈನ್ ನಲ್ಲಿದ್ದಾರೆಂದು ತಿಳಿದುಬಂದಿದೆ.
Advertisement