ಕೋವಿಡ್-19: ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ರಾಹುಲ್ ಗಾಂಧಿ ಸಂತಾಪ

ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಪ್ರತಿಯೊಂದು ರಾಜ್ಯದ ಪ್ರಾರ್ಥನೆಗಳು ಮತ್ತು ಅನುಕಂಪ ಈ ಕಠಿಮ ಸಂದರ್ಭದಲ್ಲಿ ನಿಮ್ಮೊಂದಿಗಿದೆ ಎಂದು ಹೇಳಿದ್ದಾರೆ. 

ಚಿಕಿತ್ಸೆಯ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ದೇಶದ ನಾಗರೀಕರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ದುರಂತದಲ್ಲಿ ನೀವು ಒಬ್ಬಂಟಿಯಾಗಿಲ್ಲ.  ದೇಶದ ಪ್ರತಿಯೊಂದು ರಾಜ್ಯಗಳ ಪ್ರಾರ್ಥನೆ ಮತ್ತು ಅನುಕಂಪ ನಿಮ್ಮೊಂದಿಗಿದೆ ಎಂದು ತಿಳಿಸಿದ್ದಾರೆ. 

ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ದೇಶದಲ್ಲಿಂದು 3,86,452 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, 3498 ಮಂದಿ ಸಾವನ್ನಪ್ಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com