ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೊರೋನಾದಿಂದ ಗುಣಮುಖ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ. ಕೊರೋನಾ ವೈರಸ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದ ನಂತರ ಯೋಗಿ ಆದಿತ್ಯನಾಥ್ ಏಪ್ರಿಲ್ 13ರಿಂದ ತಮ್ಮನ್ನು ತಾವು ಐಸೋಲೇಟ್ ಮಾಡಿಕೊಂಡಿದ್ದರು,.

"ನಿಮ್ಮ ಶುಭಹಾರೈಕೆ ಹಾಗೂ ವೈದ್ಯರ ಕಾಳಜಿಯಿಂದಾಗಿ, ನಾನು ಕೊರೋನಾವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದೇನೆ, ನನ್ನ ವರದಿ ನೆಗೆಟಿವ್ ಬಂದಿದೆ.. ನಿಮ್ಮ ಸಹಕಾರ ಮತ್ತು ಶುಭಕಾಮನೆಗಳಿಗಾಗಿ ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ," ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಎರಡು ವಾರಗಳ ಪ್ರತ್ಯೇಕತೆಯ ಸಮಯದಲ್ಲಿ, ಮುಖ್ಯಮಂತ್ರಿಗಳು ತಮ್ಮ ಕೆಲಸವನ್ನು ವರ್ಚುವಲ್ ಆಗಿ ನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com