ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. 
ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ
ರಾಮಮಂದಿರ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ
Updated on

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. 

ಕಳೆದ ವರ್ಷ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನೆರವೇರಿಸಿದ್ದರು. ಆದರೆ, ಉದ್ದೇಶಿತ ದೇವಾಲಯದ ನಿವೇಶನದ ಅಡಿಯಲ್ಲಿ ನೀರು ಕಂಡುಬಂದ ನಂತರ ಜನವರಿಯಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು. 

ಸದ್ಯ, ಎಂಜಿನಿಯರ್ ಗಳು ದೇವಾಲಯದ ಅಡಿಪಾಯದ ಕೆಲಸ ಮಾಡುತ್ತಿದ್ದಾರೆ. ಮುಂದಿನ ಸೆಪ್ಟೆಂಬರ್ 15ರ ಒಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ನವೆಂಬರ್ ಬಳಿಕ ಎರಡನೇ ಹಂತದ ಕಾಮಗಾರಿ ಆರಂಭಿಸುವ ಸಾಧ್ಯತೆಯಿದೆ. ಇನ್ನೆರಡು ವರ್ಷಗಳಲ್ಲಿ ದೇಗುಲದ ಪ್ರಮುಖ ಕಾರ್ಯ ಮುಗಿಯಲಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com