ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜಿನಾಮೆ!

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.
ಅಮರಿಂದರ್ ಸಿಂಗ್ ಮತ್ತು ಪ್ರಶಾಂತ್ ಕಿಶೋರ್
ಅಮರಿಂದರ್ ಸಿಂಗ್ ಮತ್ತು ಪ್ರಶಾಂತ್ ಕಿಶೋರ್

ಚಂಡಿಗಡ: ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಗುರುವಾರ ರಾಜಿನಾಮೆ ಸಲ್ಲಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ ಎಂದು ಪಂಜಾಬ್ ಸಿಎಂ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನಿರ್ಧಾರದಿಂದ ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ,  ನನ್ನ ಮುಂದಿನ ಹೆಜ್ಜೆಯ ಬಗ್ಗೆ ನಾನು ಇನ್ನೂ ತೀರ್ಮಾನಿಸಿದ ಕಾರಣ ಈ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ನಾನು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2022ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾಗಿ ಮಾರ್ಚ್ ತಿಂಗಳಲ್ಲಿ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com