ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಮುಂದಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರೈತರ ಮತ: ಅಖಿಲೇಶ್ ಯಾದವ್

ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. 

ಲಕ್ನೋ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ರೈತರೊಂದಿಗೆ ಸಂಪರ್ಕ ಸಾಧಿಸಲು ಬಿಜೆಪಿ ‘ಕಿಸಾನ್‌ ಸಮ್ಮೇಳನ’ ನಡೆಸಲು ಮುಂದಾಗಿದೆ. ‘ಅನ್ನದಾತ’, ಮತದಾರನಾಗುವ ಸಮಯ ಬಂದಾಗ ಬಿಜೆಪಿಗೆ ರೈತರ ನೆನಪಾಗಿದೆ. ಆದರೆ ಬಿಜೆಪಿಯ ಈ ಜಾಲಕ್ಕೆ ರೈತರು ಬೀಳುವುದಿಲ್ಲ’ ಎಂದು ಅವರು ಹೇಳಿದ್ದಾರೆ.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಇದೇ 16ರಿಂದ 23ರ ತನಕ ‘ಕಿಸಾನ್‌ ಸಂವಾದ’ ಕಾರ್ಯಕ್ರಮವನ್ನು ಏರ್ಪಡಿಸಿದೆ. ಇದರ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com