ಜಮ್ಮು: ಕಣಿವೆ ಪ್ರದೇಶದಲ್ಲಿ ಮತ್ತೊಮ್ಮೆ ಗುಂಡಿನ ಸಪ್ಪಳ ಕೇಳಿಬಂದು ಎನ್ ಕೌಂಟರ್ ನಡೆದು ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ.
ಎನ್ ಕೌಂಟರ್ ನಲ್ಲಿ ಒಬ್ಬ ಸಿಆರ್ ಪಿಎಫ್, ಸೇನಾ ಸಿಬ್ಬಂದಿ, ಇಬ್ಬರು ನಾಗರಿಕರಿಗೆ ಗಾಯಗಳಾಗಿದ್ದು ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಇಂದು ನಸುಕಿನ ಜಾವ ಉಗ್ರರ ಚಲನವಲನದ ಬಗ್ಗೆ ಮಾಹಿತಿ ಪಡೆದ ಸೇನಾ ಯೋಧರು ಕುಲ್ಗಾಮ್ ನಲ್ಲಿ ಪ್ರದೇಶ ಸುತ್ತುವರಿದರು. ಕೂಡಲೇ ಅವಿತು ಕುಳಿತಿದ್ದ ಉಗ್ರರು ಬಿಎಸ್ ಎಫ್ ಬೆಂಗಾವಲು ಮೇಲೆ ಗುಂಡಿನ ಮಳೆಗೈಯಲು ಆರಂಭಿಸಿದರು. ಉಗ್ರರು ಸೆರೆ ಸಿಕ್ಕಿದ್ದಾರೆ.
ಪೊಲೀಸ್ ಹಿರಿಯ ಅಧಿಕಾರಿಗಳು, ಸಿಆರ್ ಪಿಎಫ್ ಮತ್ತು ಸೇನಾಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
Advertisement