social_icon

ಭಾರತ ಅಫ್ಘಾನಿಸ್ತಾನದಲ್ಲಿ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್ ವಕ್ತಾರ

ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಬೇರೆ ರಾಷ್ಟ್ರಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ಅದರ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.

Published: 18th August 2021 09:28 AM  |   Last Updated: 18th August 2021 01:21 PM   |  A+A-


Taliban spokesman Zabihullah Mujahid, shakes hand with a journalist after his first news conference, in Kabul

ಕಾಬುಲ್ ನಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ ನಂತರ ಪತ್ರಕರ್ತರೊಬ್ಬರ ಕೈ ಕುಲುಕುತ್ತಿರುವ ತಾಲಿಬಾನ್ ವಕ್ತಾರ ಝುಬಿಹುಲ್ಲಾ ಮುಜಾಹಿದ್

Posted By : Sumana Upadhyaya
Source : The New Indian Express

ನವದೆಹಲಿ: ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಬೇರೆ ರಾಷ್ಟ್ರಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ಅದರ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.

ಯಾರ ವಿರುದ್ಧವೂ ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಯಾವುದೇ ದೇಶಕ್ಕೆ ನಾವು ಬಿಡುವುದಿಲ್ಲ. ಇದು ಸ್ಪಷ್ಟ, ಅಫ್ಘಾನಿಸ್ತಾನದಲ್ಲಿ ಭಾರತ ಹಲವು ಯೋಜನೆಗಳನ್ನು, ನಿರ್ಮಾಣಗಳನ್ನು ಮತ್ತು ಮೂಲಭೂತ ಸೌಕರ್ಯ ಯೋಜನೆಗಳನ್ನು ಮಾಡಿದೆ. ಭಾರತ ಬಯಸುವುದಾದರೆ ಅಪೂರ್ಣಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ, ಏಕೆಂದರೆ ಯೋಜನೆಗಳು ಜನರ ಪರವಾಗಿದೆ ಎಂದು ವಕ್ತಾರ ಶಹೀನ್ ಪಾಕಿಸ್ತಾನದ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉರ್ದುವಿನಲ್ಲಿ ಹೇಳಿದ್ದಾರೆ.

ಕಳೆದ ಸೋಮವಾರ ಅಫ್ಘಾನಿಸ್ತಾನವನ್ನು ತಾಲಿಬಾನೀಯರು ವಶಪಡಿಸಿಕೊಂಡ ನಂತರ ಭಾರತ ಬಗ್ಗೆ ನೀಡುತ್ತಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.

ತಾಲಿಬಾನ್ ಉಗ್ರರೊಂದಿಗೆ ಮಾತುಕತೆ, ಸಂವಹನಕ್ಕೆ ಸಿದ್ಧ ಎಂದು ಭಾರತ ಸರ್ಕಾರ ಈಗಾಗಲೇ ಸೂಚನೆ ನೀಡಿದ್ದರೂ ಕೂಡ ತಾಲಿಬಾನ್ ಒಂದು ಅಧಿಕೃತ ಸಂಘಟನೆಯಾಗಿ ಗುರುತಿಸಿಕೊಳ್ಳಬೇಕು ಎಂದು ಹೇಳಿದೆ. ಅಫ್ಘಾನಿಸ್ತಾನದ 34 ಪ್ರಾಂತ್ಯಗಳಲ್ಲಿ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ವೃತ್ತಿಪರರನ್ನು ಭಾರತ ಇತ್ತೀಚೆಗೆ ಹಿಂದಕ್ಕೆ ಕರೆಸಿಕೊಂಡಿತ್ತು.

ಈ ಯುದ್ಧಪೀಡಿತ ಅಫ್ಘಾನಿಸ್ತಾನದಲ್ಲಿ ಭಾರತ ಹೂಡಿಕೆ ಮಾಡಿರುವ ಮೊತ್ತ 3 ಬಿಲಿಯನ್ ಡಾಲರ್. ಶಟೂಟ್ ಅಣೆಕಟ್ಟು, ಸಲ್ಮಾ ಅಣೆಕಟ್ಟು, ಅಫ್ಘಾನಿಸ್ತಾನದ ಸಂಸತ್ತು ಮತ್ತು ಹಲವು ರಚನಾತ್ಮಕ ರಸ್ತೆಗಳ ನಿರ್ಮಾಣಕ್ಕೆ ಅಫ್ಘಾನಿಸ್ತಾನ ಭಾರತದ ನೆರವನ್ನು ಪಡೆದಿದೆ.

ಈ ಯೋಜನೆಗಳು ಮುಗಿದ ಬಳಿಕ ಇದರಲ್ಲಿ ಭಾರತದ ಪಾತ್ರವೇನೂ ಇರುವುದಿಲ್ಲ, ನಂತರ ಅದನ್ನು ಕಾಪಾಡಿಕೊಳ್ಳುವುದು ಅಫ್ಘಾನಿಸ್ತಾನಕ್ಕೆ ಬಿಟ್ಟ ವಿಚಾರ ಎಂದು ಕಳೆದ ವಾರ ವಿದೇಶಾಂಗ ಸಚಿವಾಲಯ ಹೇಳಿತ್ತು.

ತಮ್ಮ ಶತ್ರುಗಳು, ಮಿಲಿಟರಿ ಉದ್ದೇಶಕ್ಕಾಗಿ ಅಥವಾ ಬೇರೆ ಯಾವುದೇ ರೀತಿಯ ತಮ್ಮ ಸ್ವ ಹಿತಾಸಕ್ತಿಗೆ ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ನೋಡಿದರೆ ಅಂತವರ ಉದ್ದೇಶ ಈಡೇರುವುದಿಲ್ಲ, ತಮ್ಮ ಸಂಘಟನೆ ನೀತಿ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಾಲಿಬಾನ್ ವಕ್ತಾರ ಹೇಳಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • manjunath

    if India spending its own money then better not to invest further. Better wait and watch
    2 years ago reply
flipboard facebook twitter whatsapp