ನವದೆಹಲಿ: ಕರ್ನಾಟಕ ಹೈಕೋರ್ಟ್ನ ಆರು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದಿಸಿದೆ.
ಆಗಸ್ಟ್ 17, 2021ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಕೊಲಿಜಿಯಂ ಪ್ರಸ್ತಾವನೆಯನ್ನು ಒಪ್ಪಿಕೊಂಡಿದೆ. ಅಲ್ಲದೆ ಪ್ರಕಟಣೆಯನ್ನು ಗುರುವಾರ ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಖಾಯಂ ನ್ಯಾಯಾಧೀಶರ ಪಟ್ಟಿ: ನ್ಯಾಯಮೂರ್ತಿಗಳಾದ ನೇರನಹಳ್ಳಿ ಶ್ರೀನಿವಾಸನ್, ಸಂಜಯ್ ಗೌಡ, ಜ್ಯೋತಿ ಮೂಲಿಮನಿ, ನಟರಾಜ್ ರಂಗಸ್ವಾಮಿ, ಹೇಮಂತ್ ಚಂದನಗೌಡರ್, ಪ್ರದೀಪ್ ಸಿಂಗ್ ಯೆರೂರ್ ಮತ್ತು ಮಹೇಶನ್ ನಾಗಪ್ರಸನ್ನ.
ಇದೇ ವೇಳೆ ಕೋಲ್ಕತ್ತಾ ಹೈಕೋರ್ಟ್ ಗೆ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕೊಲಿಜಿಯಂ ಅನುಮೋದಿಸಿದೆ.
ನ್ಯಾಯಮೂರ್ತಿ ರಮಣ ಹಾಗೂ ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರು ಹೈಕೋರ್ಟ್ ನ್ಯಾಯಾಧೀಶರಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂರು ಸದಸ್ಯರ ಕೊಲಿಜಿಯಂನ ಭಾಗವಾಗಿದ್ದಾರೆ.
Advertisement