ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. 
ರಾಮನಾಥ್ ಕೋವಿಂದ್
ರಾಮನಾಥ್ ಕೋವಿಂದ್

ನವದೆಹಲಿ: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. 

ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಹೇಳಲಾಗುತ್ತದೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.

ಈ ತಿದ್ದುಪಡಿಯ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನು ಸಮ್ಮತವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಪಾಲಿನ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com