ಸುಪ್ರೀಂ ಕೋರ್ಟ್ ಎದುರು ದಂಪತಿಗಳ ಆತ್ಮಹತ್ಯೆ ಯತ್ನ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ದಂಪತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರಂದು ಶನಿವಾರ ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಪೊಲೀಸರು
ಘಟನಾ ಸ್ಥಳದಲ್ಲಿ ಪೊಲೀಸರು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ದಂಪತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರಂದು ಶನಿವಾರ ತಿಳಿದುಬಂದಿದೆ.    

ಆ.16 ರಂದು ಭಗವಾನ್ ದಾಸ್ ರಸ್ತೆಯಲ್ಲಿರುವ ಸುಪ್ರೀಂ ಕೋರ್ಟ್​ ಕಾಂಪ್ಲೆಕ್ಸ್​ ಎದುರಲ್ಲೇ ಗಂಡ-ಹೆಂಡತಿ ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ದಂಪತಿಗಳು ಬೆಂಕಿ ಹಚ್ಚಿಕೊಂಡ ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಬೆಂಕಿ ನಂದಿಸಿ, ಪೊಲೀಸ್ ವ್ಯಾನ್​ನಲ್ಲಿ ರಾಮ್ ಮನೋಹರ್ ಲೂಹಿಯಾ ಆಸ್ಪತ್ರೆಗೆ ದಾಖಲಿಸಿದ್ದರು. 

ದಂಪತಿಗಳಿಬ್ಬರೂ ಸಾಕಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾನೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com