ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ, ಅಮಿತ್ ಶಾ
ಮುಖ್ಯಮಂತ್ರಿ ಬೊಮ್ಮಾಯಿ, ಅಮಿತ್ ಶಾ

ನವದೆಹಲಿ/ಬೆಂಗಳೂರು: ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಿಟ್ಟುಕೊಂಡಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ. 

ಬುಧವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಂದಿನ ವಾರ ಬರಲು ಹೇಳಿರುವುದಾಗಿ ತಿಳಿಸಿದರು. 

ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಈಗಲೆ ಹೇಳಲು ಸಾಧ್ಯವಿಲ್ಲ. ಮುಂದಿನ ವಾರ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳುವ ಮೂಲಕ ಮಂತ್ರಿಮಂಡಲದಲ್ಲಿ ಅವಕಾಶಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದವರಿಗೆ ನಿರಾಸೆ ಮೂಡಿಸಿದರು. 

ತದನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com