ತ್ರಿಪುರ: ಸರ್ವಿಸ್ ರೈಫಲ್ ನಿಂದ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಯೋಧ, ಬಂಧನ

ತ್ರಿಪುರ ಸ್ಟೇಟ್ ರೈಫಲ್ಸ್ ನ ಯೋಧರೊಬ್ಬರು ಶನಿವಾರ ಸರ್ವಿಸ್ ರೈಫಲ್ ನಿಂದ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಯೋಧನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗುವಾಹಟಿ: ತ್ರಿಪುರ ಸ್ಟೇಟ್ ರೈಫಲ್ಸ್ ನ ಯೋಧರೊಬ್ಬರು ಶನಿವಾರ ಸರ್ವಿಸ್ ರೈಫಲ್ ನಿಂದ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಯೋಧನನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಪಶ್ಚಿಮ ತ್ರಿಪುರಾದಲ್ಲಿ ಈ ಘಟನೆ ನಡೆದಿದ್ದು. ಯೋಧ ಸುಕಾಂತ ದಾಸ್(38) ಅವರು ಸುಬೇದಾರ್ ಮಾರ್ಕಾ ಸಿಂಗ್ ಜಮಾತಿಯಾ (47) ಮತ್ತು ನಾಯೆಬ್ ಸುಬೇದಾರ್ ಕಿರಣ್ ಜಮಾತಿಯಾ(37) ಅವರೊಂದಿಗೆ ಕೆಲವು ಕಾರಣಗಳಿಗಾಗಿ ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯ ಸಮಯದಲ್ಲಿ ದಾಸ್ ತನ್ನ ಸರ್ವಿಸ್ ರೈಫಲ್‌ನಿಂದ ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಸುಬೇದಾರ್ ಮಾರ್ಕಾ ಸಿಂಗ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಜಮಾತಿಯಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ, ಗುಂಡಿನ ದಾಳಿ ನಡೆಸಿದ ಯೋಧನನ್ನು ನಿಶ್ಯಸ್ತ್ರಗೊಳಿಸಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇವರೆಲ್ಲರನ್ನು ಕೊನಬಾನ್‌ನಲ್ಲಿರುವ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಡ್ರಿಲ್ಲಿಂಗ್ ಸ್ಥಳದಲ್ಲಿ ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com