ರೈತ ನಾಯಕ ರಾಕೇಶ್ ಟಿಕಾಯತ್ ರನ್ನು ಉಗ್ರಗಾಮಿ ಎಂದು ಕರೆದ ಬಿಜೆಪಿ ನಾಯಕ

ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗುವ ಹಾಗೆ ರಾಕೇಶ್ ಟಿಕಾಯತ್ ಮಾಡಿದ್ದಾರೆ ಎಂದು ಹರಿನಾರಾಯಣ್ ಆರೋಪಿಸಿದ್ದಾರೆ.
ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್

ನವದೆಹಲಿ: ಬಿಜೆಪಿ ನಾಯಕ, ಮಾಜಿ ಸಂಸದ ಹರಿನಾರಾಯಣ್ ರಾಜ್ಭರ್ ಅವರು ರೈತನಾಯಕ, ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಉಗ್ರಗಾಮಿ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಕೇಂದ್ರ ಇತ್ತೀಚಿಗೆ ಹಿಂಪಡೆದ ಕೃಷಿ ಕಾನೂನಿನಿಂದ ನಿಜವಾದ ರೈತರಿಗೆ ಲಾಭವಾಗುತ್ತಿತ್ತು, ಆದರೆ ಅದರ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗುವ ಹಾಗೆ ರಾಕೇಶ್ ಟಿಕಾಯತ್ ಮಾಡಿದ್ದಾರೆ ಎಂದು ಹರಿನಾರಾಯಣ್ ಆರೋಪಿಸಿದ್ದಾರೆ.

ರೈತ ಪ್ರತಿಭಟನೆ ಸಂದರ್ಭದಲ್ಲಿ ಮೃತಪಟ್ಟ 700 ಮಂದಿ ರೈತರ ಸಾವಿಗೆ ರಾಕೇಶ್ ಟಿಕಾಯತ್ ಕಾರಣವೇ ಹೊರತು ಕೇಂದ್ರ ಸರ್ಕಾರ ಅಲ್ಲ ಎಂದು ಅವರು ತೀವ್ರವಾಗಿ ಕಿಡಿ ಕಾರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com