ಭೂಪಾಲ್: ಹಾಸ್ಯ ನಟರಾದ ಕುನಾಲ್ ಕಮ್ರಾ ಮತ್ತು ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಇತ್ತೀಚಿಗೆ ತಡೆ ನೀಡಿದ ನಂತರ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಭೂಪಾಲ್ ನಲ್ಲಿ ಹಾಸ್ಯ ಕಾರ್ಯಕ್ರಮ ನೀಡಲು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆಹ್ವಾನಿಸಿದ್ದಾರೆ.
ಹಿಂದೂ ಬಲಪಂಥೀಯ ಸಂಘಟನೆಗಳ ಪ್ರತಿಭಟನೆಗಳ ನಡುವೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ಫಾರೂಕಿಗೆ ಕಳೆದ ತಿಂಗಳು ಅವಕಾಶ ನಿರಾಕರಿಸಲಾಗಿತ್ತು. ಕೆಲವು ದಿನಗಳ ನಂತರ, ಸಂಘಟಕರಿಗೆ ಬೆದರಿಕೆ ಬಂದ ನಂತರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕುನಾಲ್ ಕಮ್ರಾ ಹೇಳಿದ್ದರು.
ಸೋಮವಾರ ಟ್ವೀಟ್ ವೊಂದನ್ನು ಮಾಡಿರುವ ದಿಗ್ವಿಜಯ್ ಸಿಂಗ್, ಕುನಾಲ್ ಮತ್ತು ಮುನಾವರ್ ಗಾಗಿ ಭೂಪಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸುತ್ತೇನೆ. ಎಲ್ಲಾ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಹಾಸ್ಯದ ವಿಷಯ ದಿಗ್ವಿಜಯ್ ಸಿಂಗ್ ಮಾತ್ರ ಆಗಿರಬೇಕು. ಆರ್ ಎಸ್ ಎಸ್ ಕಾರ್ಯಕರ್ತರನ್ನು ಇದರಲ್ಲಿ ಆಕ್ಷೇಪಿಸಬಾರದು. ಭಯಪಡಬೇಡಿ, ದಿನಾಂಕ ಮತ್ತು ಸಮಯ ಕೊಡಿ, ನಿಮ್ಮ ಎಲ್ಲಾ ಷರತ್ತುಗಳನ್ನು ಒಪ್ಪುವುದಾಗಿ ಹೇಳಿದ್ದಾರೆ.
ಈ ಫೋಸ್ಟ್ ನಲ್ಲಿ ಕಮ್ರಾ ಅವರಿಗೆ ಸಂಬಂಧಿಸಿದ ನ್ಯೂಸ್ ಅರ್ಟಿಕಲ್ ವೊಂದನ್ನು ರಾಜ್ಯ ಸಭಾ ಸದಸ್ಯರು ಟ್ಯಾಗ್ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜನವರಿಯಲ್ಲಿ ಬಿಜೆಪಿ ಶಾಸಕರ ಪುತ್ರ ನೀಡಿದ ದೂರಿನ ಮೇರೆಗೆ ಫಾರೂರಿ ಅವರು ಸಂಸದ ಇಂದೋರ್ನಲ್ಲಿ ಒಂದು ತಿಂಗಳು ಜೈಲಿನಲ್ಲಿ ಕಳೆದಿದ್ದರು.
Advertisement