ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಸೋನಿಯಾ ಗಾಂಧಿ; ಮಮತಾ'ರ ಟಿಎಂಸಿಗೆ ಆಹ್ವಾನವಿಲ್ಲ!
ಸಂಸತ್ ಚಳಿಗಾಳದ ಅಧಿವೇಶನದ ಹಿನ್ನೆಲೆ ಜಂಟಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರತಿಪಕ್ಷ ನಾಯಕರ ತಂಡವನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
Published: 14th December 2021 09:24 PM | Last Updated: 14th December 2021 09:24 PM | A+A A-

ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ
ನವದೆಹಲಿ: ಸಂಸತ್ ಚಳಿಗಾಳದ ಅಧಿವೇಶನದ ಹಿನ್ನೆಲೆ ಜಂಟಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರತಿಪಕ್ಷ ನಾಯಕರ ತಂಡವನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಶಿವಸೇನೆ ನಾಯಕ ಸಂಜಯ್ ರಾವತ್ ಮತ್ತು ಡಿಎಂಕೆ ನಾಯಕ ಟಿಆರ್ ಬಾಲು ಅವರು ಜನಪಥ್ ನಿವಾಸದಲ್ಲಿ ಸೋನಿಯಾ ಅವರನ್ನು ಭೇಟಿಯಾದ ಪ್ರಮುಖ ನಾಯಕರು.
ಇನ್ನು ಕಾಂಗ್ರೆಸ್ನೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ಗೆ ಆಹ್ವಾನ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ವಿರೋಧ ಶಕ್ತಿಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಇಂತಹ ಹೆಚ್ಚಿನ ಸಭೆಗಳನ್ನು ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
12 ರಾಜ್ಯಸಭಾ ಸಂಸದರ ಅಮಾನತಿಗೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಅವರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.
ಮಂಗಳವಾರದ ಸಭೆಯಲ್ಲಿ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಭಾಗವಹಿಸಿದ್ದರು.
ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉದ್ಧವ್ ಠಾಕ್ರೆ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಿದ್ದಾರೆ. ಇಬ್ಬರೂ ತಮ್ಮ ನಾಯಕರನ್ನು ಪ್ರತಿನಿಧಿಸಿದರು.