ದೇಶ
ಉತ್ತರಪ್ರದೇಶ: ಮುಸ್ಲಿಮರಿಗೆ ಮಾತ್ರ ಮಕ್ಕಳನ್ನು ಹುಟ್ಟಿಸುವುದು ಗೊತ್ತು - ಸಚಿವ ಬಲದೇವ್ ಸಿಂಗ್
ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.
ಲಖನೌ: ಉತ್ತರ ಪ್ರದೇಶದ ಸಚಿವ ಬಲದೇವ್ ಸಿಂಗ್ ಔಲಾಖ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಸಂಪುಟದ ಜಲಶಕ್ತಿ ಸಚಿವ, ಮುಸ್ಲಿಂ ಸಮುದಾಯದ ಜನರಿಗೆ ಮಾತ್ರ ಮಕ್ಕಳನ್ನು ಹೇಗೆ ಹುಟ್ಟಿಸುವುದು ಎಂಬುದು ತಿಳಿದಿದೆ ಎಂದು ಹೇಳಿದ್ದಾರೆ.
ಮುಸ್ಲಿಂ ಸಮುದಾಯದ ಜನರು ಕೇವಲ ತಿನ್ನುತ್ತಾರೆ ಮತ್ತು ಕುಡಿಯುತ್ತಾರೆ ಹಾಗೂ ಮಕ್ಕಳನ್ನು ಹುಟ್ಟಿಸುತ್ತಾರೆ. ಅವರ ಮಕ್ಕಳ ಶಿಕ್ಷಣ ಅಥವಾ ಉನ್ನತೀಕರಣ ಅವರಿಗೆ ಆದ್ಯತೆಯಾಗಿಲ್ಲ ಎಂದು ಉತ್ತರ ಪ್ರದೇಶದ ಬಿಲಾಸ್ಪುರದ ಬಿಜೆಪಿ ಶಾಸಕ ಹೇಳಿದ್ದಾರೆ.