social_icon

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ

ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

Published: 23rd December 2021 02:13 PM  |   Last Updated: 23rd December 2021 03:20 PM   |  A+A-


ಸಾಂದರ್ಭಿಕ ಚಿತ್ರ

Posted By : harshavardhan
Source : Online Desk

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಿತವಾಗುತ್ತಿರುವ ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ತನಿಖೆಗೆ ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಗಂಗಾಸ್ನಾನ ಮಾಡಲಿಲ್ಲ ಏಕೆಂದರೆ ಗಂಗೆ ಕಲುಷಿತ ಅಂತ ಅವರಿಗೆ ಗೊತ್ತು: ಅಖಿಲೇಶ್ ಯಾದವ್

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ, ರಾಮ ಮಂದಿರ ನಿರ್ಮಾಣ ಕುರಿತು ಇದ್ದ ವಿವಾದಕ್ಕೆ ತೆರೆಬಿದ್ದ ನಂತರ ಶಾಸಕರು, ಮೇಯರ್‍ಗಳು, ಆಯುಕ್ತರ ಸಂಬಂಧಿಕರು, ಎಸ್‍ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವದಂತಿ ಹರಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ: ಮುಸ್ಲಿಮರಿಗೆ ಮಾತ್ರ ಮಕ್ಕಳನ್ನು ಹುಟ್ಟಿಸುವುದು ಗೊತ್ತು - ಸಚಿವ ಬಲದೇವ್ ಸಿಂಗ್

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಇದೇ ವಿಷಯ ಪ್ರಸ್ತಾಪಿಸಲು ಪ್ರಯತ್ನಿಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಇದನ್ನು “ಭೂ ಹಗರಣ” ಎಂದು ಕರೆದರು.

ಇದನ್ನೂ ಓದಿ: ಬುದ್ಧನ ಪ್ರತಿಮೆ ಧ್ವಂಸ ಮಾಡಿದಕ್ಕೆ ಅಮೆರಿಕಾದಿಂದ ತಾಲಿಬಾನ್ ಮೇಲೆ ಬಾಂಬ್ ದಾಳಿ: ಸಿಎಂ ಯೋಗಿ ಆದಿತ್ಯನಾಥ್

'ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ? ಇದು ದೇಶದ್ರೋಹಕ್ಕಿಂತ ಕಡಿಮೆಯೇ?' ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಸಾಮೂಹಿಕ ವಿವಾಹ ಯೋಜನೆ: ಸ್ಕೀಮ್ ನ ಲಾಭಾಂಶಕ್ಕಾಗಿ ತಂಗಿಯನ್ನೇ ಮದುವೆಯಾದ ಅಣ್ಣ!


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp