ಕೇರಳ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಅಗ್ನಿಗಾಹುತಿಯಾದ ಪೊಲೀಸ್ ಜೀಪ್ 

ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು.
ಬೆಂಕಿಗಾಹುತಿಯಾದ ಪೊಲೀಸ್ ಜೀಪ್
ಬೆಂಕಿಗಾಹುತಿಯಾದ ಪೊಲೀಸ್ ಜೀಪ್

ಎರ್ನಾಕುಲಂ: ಪೊಲೀಸರು ಹಾಗೂ ವಲಸೆ ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಳಕ್ಕಂಬಳಂ ಎಂಬಲ್ಲಿನ ಕಾರ್ಮಿಕರ ಶಿಬಿರದಲ್ಲಿ ಈ ದುರ್ಘಟನೆ ನಡೆದಿದ್ದು ವಲಸೆ ಕಾರ್ಮಿಕರ ಆಕ್ರೋಶಕ್ಕೆ ಪೊಲೀಸ್ ಜೀಪ್ ಬೆಂಕಿಗಾಹುತಿಯಾಗಿದೆ.

ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಮಧ್ಯ ಪ್ರವೇಶಿಸಿದ್ದರು.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ವಲಸೆ ಕಾರ್ಮಿಕರು ಪೊಲೀಸರ ಮೇಲೆ ತಿರುಗಿಬಿದ್ದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com