ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್ ಸಿಪಿ ಮುಖಂಡ ಎಕನಾಥ್ ಖಾಡ್ಸೆ ಅಳಿಯನ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಏಕನಾಥ್ ಖಾಡ್ಸೆ
ಏಕನಾಥ್ ಖಾಡ್ಸೆ

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖಂಡ ಏಕನಾಥ್ ಖಾಡ್ಸೆ ಅವರ ಅಳಿಯನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಗಿರೀಶ್ ಚೌಧರಿಯನ್ನು ಮಂಗಳವಾರ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ, 2016 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸುವ ವೇಳೆ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ವಿಚಾರಣೆ ವೇಳೆ ಗಿರೀಸ್ ಚೌಧರಿ ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.  ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುವ ವಿಶೇಷ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುವ ಸಾಧ್ಯತೆಯಿದೆ.

ಬಿಜೆಪಿಯಲ್ಲಿ ಎಕನಾಥ್ ಖಾಡ್ಸೆ ಕಳೆದ ವರ್ಷ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಿದ್ದರು. ಈ ವರ್ಷದ ಆರಂಭದಲ್ಲಿ ಏಕನಾಥ್ ಗೋಡ್ಸೆ ಅವರನ್ನು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com