ರಾಜ್ಯಗಳಿಗೆ ಲಸಿಕೆಗಳನ್ನು ಪೂರೈಸುವತ್ತ ಗಮನಹರಿಸಿ: ಹೊಸ ಆರೋಗ್ಯ ಸಚಿವರಿಗೆ ಚಿದಂಬರಂ ಕಿವಿಮಾತು

ಹರ್ಷವರ್ಧನ್ ರಾಜಿನಾಮೆ ನಂತರ ಕೇಂದ್ರ ಆರೋಗ್ಯ ಸಚಿವರಾಗಿ ಮನ್ಸುಕ್ ಮಾಂಡವಿಯಾ ಅಧಿಕಾರ ಸ್ವೀಕರಿಸಿದ್ದು, ಮೊದಲಿಗೆ ರಾಜ್ಯಗಳಿಗೆ ಲಸಿಕೆ ಪೂರೈಸುವತ್ತ ಮೊದಲು ಗಮನ ಹರಿಸಿ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಸಲಹೆ ನೀಡಿದ್ದಾರೆ
ಚಿದಂಬರಂ
ಚಿದಂಬರಂ

ನವದೆಹಲಿ: ಹರ್ಷವರ್ಧನ್ ರಾಜಿನಾಮೆ ನಂತರ ಕೇಂದ್ರ ಆರೋಗ್ಯ ಸಚಿವರಾಗಿ ಮನ್ಸೂಕ್ ಮಾಂಡವಿಯಾ ಅಧಿಕಾರ ಸ್ವೀಕರಿಸಿದ್ದು, ಮೊದಲಿಗೆ ರಾಜ್ಯಗಳಿಗೆ ಲಸಿಕೆ ಪೂರೈಸುವತ್ತ ಮೊದಲು ಗಮನ ಹರಿಸಿ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಸಲಹೆ ನೀಡಿದ್ದಾರೆ.

ಲಸಿಕೆಗಳು ಪೂರೈಕೆಯಾಗದ ಕಾರಣ ತಮಿಳುನಾಡಿನ ಹಲವಾರು ಕೇಂದ್ರಗಳಲ್ಲಿ ಲಸಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೊಮ್ಮೆ, ಲಸಿಕೆಗಳು ಮುಗಿದ ಕಾರಣ ತಮಿಳುನಾಡಿನ ಹಲವಾರು ಕೇಂದ್ರಗಳಲ್ಲಿ ಲಸಿಕೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಮೊದಲ ಕಾರ್ಯವೆಂದರೆ ಎಲ್ಲಾ ರಾಜ್ಯಗಳಿಗೆ ಲಸಿಕೆಗಳನ್ನು ಸಮರ್ಪಕವಾಗಿ ಮತ್ತು ನಿರಂತರವಾಗಿ ಸರಬರಾಜು ಮಾಡುವುದನ್ನು ಖಚಿತಪಡಿಸುವುದು" ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com