ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜುಲೈ 15 ರಂದು ಸ್ವಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುವ ಸಾಧ್ಯತೆ ಇರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ವೇಳೆ ಸಿಗ್ರಾದಲ್ಲಿ ನಿರ್ಮಿಸಲಾಗಿರುವ ರುದ್ರಾಕ್ಷ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಜಪಾನ್ ಸಹಯೋಗದೊಂದಿಗೆ ಇದನ್ನು ನಿರ್ಮಿಸಲಾಗಿದ್ದು, ಭಾರತದಲ್ಲಿನ ಜಪಾನ್ ರಾಯಭಾರಿ ಜೊತೆಗೂಡಿ ಪ್ರಧಾನಿ ನರೇಂದ್ರ ಉದ್ಘಾಟಿಸಲಿದ್ದು, ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಅವರ ವಿಡಿಯೋ ಸಂದೇಶವನ್ನು ಅಲ್ಲಿ ಪ್ರಸಾರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಭದ್ರತಾ ವ್ಯವಸ್ಥೆಗಳ ದೃಷ್ಟಿಯಿಂದ ವಿಶೇಷ ರಕ್ಷಣಾ ಗುಂಪು ಇಂದು ಸಂಜೆ ವೇಳೆಗೆ ವಾರಾಣಸಿಗೆ ತಲುಪಲಿದ್ದು, ಸ್ಥಳದ ಸುರಕ್ಷತೆಗಾಗಿ ನೀಲನಕ್ಷೆಯನ್ನು ಸಿದ್ಧಪಡಿಸುತ್ತದೆ.
Advertisement