ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!

ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಕ್ತಾರ್ ಅಬ್ಬಾಸ್ ನಖ್ವಿ
ಮುಕ್ತಾರ್ ಅಬ್ಬಾಸ್ ನಖ್ವಿ

ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ ಸ್ಥಾನದಲ್ಲಿ ನಖ್ವಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿರುವ ನಖ್ವಿ ಅವರು ಸಂಸದೀಯ ವ್ಯವಹಾರಗಳ ಬಗ್ಗೆ ವ್ಯಾಪಕ ಜ್ಞಾನ ಹೊಂದಿದ್ದು, ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜಕೀಯ ವಲಯದಲ್ಲಿ ಬಹುತೇಕ ಎಲ್ಲ ನಾಯಕರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಕೋವಿಡ್ ನಿರ್ವಹಣೆ ಇಂಧನ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ರೈತರ ಪ್ರತಿಭಟನೆ  ವಿಚಾರವಾಗಿ ಅಧಿವೇಶನದಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿರುವ ಈ ಹೊತ್ತಿನಲ್ಲಿ ನಖ್ವಿ ಅವರ ಆಯ್ಕೆ ಮೋದಿ ಸರ್ಕಾರ ಎಷ್ಟರಪಟ್ಟಿಗೆ ನೆರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com