ದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆ ಕೇಂದ್ರದಿಂದ ಸ್ಥಗಿತ!

ಸದ್ಯದಲ್ಲೇ ಚಾಲನೆಯಾಗಬೇಕಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಹತ್ವಾಕಾಂಕ್ಷಿಯಾದ ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸದ್ಯದಲ್ಲೇ ಚಾಲನೆಯಾಗಬೇಕಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಹತ್ವಾಕಾಂಕ್ಷಿಯಾದ ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ದೆಹಲಿ ಸರ್ಕಾರದ ಮೂಲಗಳು ಶನಿವಾರ ಈ ಮಾಹಿತಿಯನ್ನು ನೀಡಿವೆ.

ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಸುವ ಯೋಜನೆಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು, ಮುಂದಿನ ವಾರ ಅದನ್ನು ಚಾಲನೆಯಾಗಬೇಕಿತ್ತು ಎಂದು ಮೂಲಗಳು ತಿಳಿಸಿವೆ.

ಈ ಯೋಜನೆ ಅನುಷ್ಠಾನಗೊಳಿಸುವ ಮೊದಲು ಅನುಮೋದನೆ ಪಡೆದಿಲ್ಲ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com