ಈಟೆಲಾ ರಾಜೇಂದರ್
ಈಟೆಲಾ ರಾಜೇಂದರ್

ತೆಲಂಗಾಣ ಮಾಜಿ ಸಚಿವ ಈಟೆಲಾ ರಾಜೇಂದರ್ ಬಿಜೆಪಿಗೆ ಸೇರ್ಪಡೆ

ತೆಲಂಗಾಣದ ಮಾಜಿ ಸಚಿವ ಈಟೆಲಾ ರಾಜೇಂದರ್ ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಹೈದರಾಬಾದ್: ತೆಲಂಗಾಣದ ಮಾಜಿ ಸಚಿವ ಈಟೆಲಾ ರಾಜೇಂದರ್ ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ರಾಜೇಂದರ್ ಮತ್ತು ಇತರರು ವಿಶೇಷ ವಿಮಾನದಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಮತ್ತು ಕೇಂದ್ರ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು.

ಇಂದು ರಾಜೇಂದರ್ ಜೊತೆ ಮಾಜಿ ಸಂಸದ ರಮೇಶ್ ರಾಥೋಡ್, ಮಾಜಿ ಶಾಸಕ ಎನುಗು ರವೀಂದರ್ ರೆಡ್ಡಿ, ಮಾಜಿ ಟಿಆರ್ಎಸ್ ಮಹಿಲಾ ಅಧ್ಯಕ್ಷ ತುಲಾ ಉಮಾ, ನಳಿನಿ, ಮಾಜಿ ಟಿಎಸ್ಆರ್ಟಿಸಿ ನೌಕರರ ಸಂಘಗಳು ಜೆಎಸಿ ಅಧ್ಯಕ್ಷ ಅಶ್ವಥಮಾ ರೆಡ್ಡಿ, ಕಂಟೋನ್ಮೆಂಟ್(ಹೈದರಾಬಾದ್) ಉಪಾಧ್ಯಕ್ಷ ಸದಾ ಕೇಶವ್ ರೆಡ್ಡಿ, ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮುಖಂಡರು ಮತ್ತು ಕೆಲವೇ ಇತರರು ಕೇಸರಿ ಪಕ್ಷಕ್ಕೆ ಸೇರಿದ್ದಾರೆ.

ಪಕ್ಷದ ಸೇರ್ಪಡೆ ಸಮಾರಂಭದ ವೇಳೆ ಸಂಸದ ಧರ್ಮಪುರಿ ಅರವಿಂದ್, ಸಂಸದ ಸೋಯಂ ಬಾಪುರಾವ್, ಶಾಸಕ ಎಂ.ರಘುನಂದನ್ ರಾವ್, ಜಿ ಪ್ರೀಮಂದರ್ ರೆಡ್ಡಿ ಸೇರಿದಂತೆ ತೆಲಂಗಾಣ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಕೇಸರಿ ಪಕ್ಷಕ್ಕೆ ಸೇರುವ ಎರಡು ದಿನಗಳ ಮೊದಲು ರಾಜೇಂದರ್ ತೆಲಂಗಾಣ ರಾಜ್ಯ ವಿಧಾನಸಭೆಯಲ್ಲಿ ತಮ್ಮ ಶಾಸಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com