ಡಿಪಿಐಐಟಿ ನಿರ್ದೇಶಕ ಗುರುಪ್ರಸಾದ್ ಮಹಾಪಾತ್ರ ಕೊರೋನಾ ಸೋಂಕಿನಿಂದ ಸಾವು

ಕೇಂದ್ರ ಕೈಗಾರಿಕಾ ಮತ್ತು ಆಂತರಿಕ ವ್ಯವಹಾರ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಮಹಾಪಾತ್ರ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಡಿಪಿಐಐಟಿ ನಿರ್ದೇಶಕ ಗುರುಪ್ರಸಾದ್ ಮಹಾಪಾತ್ರ
ಡಿಪಿಐಐಟಿ ನಿರ್ದೇಶಕ ಗುರುಪ್ರಸಾದ್ ಮಹಾಪಾತ್ರ

ನವದೆಹಲಿ: ಕೇಂದ್ರ ಕೈಗಾರಿಕಾ ಮತ್ತು ಆಂತರಿಕ ವ್ಯವಹಾರ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಮಹಾಪಾತ್ರ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಗುರುಪ್ರಸಾದ್ ಅವರ ಸಾವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಂತಾಪ ಸೂಚಿಸಿದ್ದಾರೆ.

ಅತ್ಯುತ್ತಮ ಅಧಿಕಾರಿಯಾಗಿದ್ದ ಮಹಾಪಾತ್ರ ಅವರು ದೇಶದ ಬೆಳವಣಿಗೆಗೆ ತಮ್ಮದೇ ಆದ ಸೇವೆ ಸಲ್ಲಿಸಿದ್ದರು ಎಂದು ಗೋಯಲ್ ಬಣ್ಣಿಸಿದ್ದಾರೆ.

ಏರ್‍ಪೋರ್ಟ್ ಆಥಾರಿಟಿ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಹಾಪಾತ್ರ ಅವರು, 2019ರಲ್ಲಿ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದರು.

ಕಳೆದ ಏಪ್ರಿಲ್‍ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com