ಮತ್ತೆ ಐಟಿ ನಿಯಮ ಉಲ್ಲಂಘನೆ: ಟ್ವಿಟರ್ ಇಂಡಿಯಾ ಹೊಸ  ದೂರು ಸ್ಪಂದನೆ ಅಧಿಕಾರಿಯಾಗಿ ಯುಎಸ್ ಮೂಲದ ಜೆರೆಮಿ ಕೆಸೆಲ್ ನೇಮಕ

ಟ್ವಿಟರ್ ನ ಚಂದಾದಾರರ ದೂರುಗಳನ್ನು ಆಲಿಸುವುದಕ್ಕೆ ನೇಮಕ ಮಾಡಲಾಗಿದ್ದ ಅಧಿಕಾರಿ ಧರ್ಮೇಂದ್ರ ಚತುರ್ ಅವರ ನಿರ್ಗಮನದ ಬೆನ್ನಲ್ಲೆ ಅಮೆರಿಕಾದ ಸಂಸ್ಥೆ ಕ್ಯಾಲಿಫೋರ್ನಿಯಾ ಮೂಲದ ವ್ಯಕ್ತಿಯೋರ್ವನನ್ನು ಆ ಹುದ್ದೆಗೆ ನೂತನವಾಗಿ ನೇಮಕ ಮಾಡಿದೆ. 
ಟ್ವಿಟರ್
ಟ್ವಿಟರ್

ನವದೆಹಲಿ: ಟ್ವಿಟರ್ ನ ಚಂದಾದಾರರ ದೂರುಗಳನ್ನು ಆಲಿಸುವುದಕ್ಕೆ ನೇಮಕ ಮಾಡಲಾಗಿದ್ದ ಅಧಿಕಾರಿ ಧರ್ಮೇಂದ್ರ ಚತುರ್ ಅವರ ನಿರ್ಗಮನದ ಬೆನ್ನಲ್ಲೆ ಅಮೆರಿಕಾದ ಸಂಸ್ಥೆ ಕ್ಯಾಲಿಫೋರ್ನಿಯಾ ಮೂಲದ ವ್ಯಕ್ತಿಯೋರ್ವನನ್ನು ಆ ಹುದ್ದೆಗೆ ನೂತನವಾಗಿ ನೇಮಕ ಮಾಡಿದೆ. 

ಟ್ವಿಟರ್ ಗ್ಲೋಬಲ್ ನ ಕಾನೂನು ನೀತಿ ನಿರ್ದೇಶಕ ಜೆರೆಮಿ ಕೆಸೆಲ್ ಟ್ವಿಟರ್ ಇಂಡಿಯಾದಲ್ಲಿ ದೂರು ಆಲಿಸುವ ಅಧಿಕಾರಿಯಾಗಿ ಮುಂದುವರೆಯಲಿದ್ದು, ಇದೂ ಸಹ ಭಾರತದ ಹೊಸ ಐಟಿ ನಿಯಮಗಳಿಗೆ ವಿರುದ್ಧವಾಗಿದೆ. ಎಲ್ಲಾ ನೋಡಲ್ ಅಧಿಕಾರಿಗಳು, ಭಾರತೀಯ ಮೂಲದವರೇ ಆಗಿರಬೇಕೆಂಬ ನಿಯಮವಿದೆ. 

ಹೊಸ ಐಟಿ ಕಾನೂನುಗಳ ಪಾಲನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ- ಟ್ವಿಟರ್ ನಡುವೆ ಜಟಾಪಟಿ ನಡೆಯುತ್ತಿದ್ದಾಗಲೇ ಚತುರ್ ತಮ್ಮ ಸ್ಥಾನದಿಂದ ನಿರ್ಮಗಿಸಿದ್ದರು. 

ಐಟಿ ಕಾನೂನುಗಳನ್ನು ಉದ್ದೇಶಪೂರ್ವಕವಾಗಿ ಪಾಲನೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಟ್ವಿಟರ್ ವಿರುದ್ಧ ಅಸಮಾಧಾನ ಹೊರಹಾಕಿತ್ತು. ಮೇ.25 ರಂದು ಹೊಸ ಕಾನೂನು ಜಾರಿಯಾಗಿದ್ದು, ಸಾಮಾಜಿಕ ಜಾಲತಾಣ ಸಂಸ್ಥೆಗಳು ತಮ್ಮ ಗ್ರಾಹಕರಿಂದ ದೂರು ಅಥವಾ ಆಕ್ಷೇಪಣೆಗಳು ವ್ಯಕ್ತವಾದಲ್ಲಿ ಅವುಗಳನ್ನು ಆಲಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕಿದೆ. 

50 ಲಕ್ಷ ಬಳಕೆದಾರರನ್ನು ಹೊಂದಿರುವ ಸಂಸ್ಥೆಗಳು ಕುಂದು-ಕೊರತೆಗಳನ್ನು ಆಲಿಸುವ ಅಧಿಕಾರಿಯನ್ನು ನೇಮಕ ಮಾಡಿ ಅವರ ಹೆಸರನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕೆಂಬ ನಿಯಮವಿದೆ. ಅಷ್ಟೇ ಅಲ್ಲದೇ ಮುಖ್ಯ ಅನುಸರಣೆ ಅಧಿಕಾರ, ನೋಡಲ್ ಸಂಪರ್ಕ ಅಧಿಕಾರಿ ಹಾಗೂ ಸ್ಥಳೀಯವಾಗಿ ಕುಂದು ಕೊರತೆಗಳನ್ನು ಆಲಿಸುವ ಅಧಿಕಾರಿಯ ನೇಮಕವಾಗಬೇಕಿದೆ. 

ಸರ್ಕಾರದ ಮಾಹಿತಿಯ ಪ್ರಕಾರ ಟ್ವಿಟರ್ ನ ಮೊಂಡಾಟಕ್ಕೆ ಈಗ ಅದು ಕಾನೂನಿನ ರಕ್ಷಣೆಯನ್ನು ಕಳೆದುಕೊಂಡಿದ್ದು, ಟ್ವಿಟರ್ ನಲ್ಲಿ ಅದರ ಚಂದಾದಾರರು ಪೋಸ್ಟ್ ಮಾಡುವ ಅಂಶಗಳಿಗೆ ಕಾನೂನಾತ್ಮಕವಾಗಿ ಸಂಸ್ಥೆಯೇ ಹೊಣೆಯಾಗಿರಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com