social_icon

ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಕೊಲೆ ಬೆದರಿಕೆ: ವಿಕೆ ಶಶಿಕಲಾ ವಿರುದ್ಧ ಎಫ್‌ಐಆರ್

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Published: 30th June 2021 03:24 PM  |   Last Updated: 30th June 2021 03:24 PM   |  A+A-


VK Sasikala

ವಿಕೆ ಶಶಿಕಲಾ

ANI

ಚೆನ್ನೈ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 

ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಫೋನ್‌ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) 109ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 

ತಮಿಳುನಾಡಿನ ಮಾಜಿ ಸಚಿವ ಷಣ್ಮುಗಂ ಅವರನ್ನು ಬೆದರಿಸಿದ ಆರೋಪದ ಮೇಲೆ ಶಶಿಕಲಾ ಮತ್ತು 501 ಬೆಂಬಲಿಗರು ಸೇರಿದಂತೆ ಪ್ರಕರಣಗಳು ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

ಶಶಿಕಲಾ ಪಿಎ ಕಾರ್ತಿಕೇಯನ್ ಕಳುಹಿಸಿದ ಆಡಿಯೊ ಕ್ಲಿಪ್‌ನಲ್ಲಿ ಮಾಜಿ ಶಾಸಕ ಕದಿರ್ಕಮು ಅವರೊಂದಿಗಿನ ಸಂವಾದದಲ್ಲಿ ತನ್ನ ಮತ್ತು ಪಕ್ಷದ ವಿರುದ್ಧ ದಂಗೆ ಎದ್ದ ಕಾರಣಕ್ಕಾಗಿ ಮಾಜಿ ಸಿಎಂ ಒ ಪನ್ನೀರ್‌ಸೆಲ್ವಂ ಮತ್ತು ಇತರ ಹತ್ತು ಶಾಸಕರನ್ನು ಅನರ್ಹಗೊಳಿಸದಂತೆ ಪಕ್ಷಕ್ಕೆ ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಹೇಳಿಕೊಂಡಿದ್ದಾರೆ.

ಶಶಿಕಲಾ ಅವರ ಮತ್ತೊಂದು ಆಡಿಯೊ ಕ್ಲಿಪ್ ಹೊರಬಂದಿದ್ದು ಶಶಿಕಲಾ ಅನರ್ಹ ಮೂವರು ಶಾಸಕರೊಂದಿಗೆ ಮಾತನಾಡಿದ್ದಾರೆ. ಅದರಲ್ಲಿ ಪನ್ನೀರ್‌ಸೆಲ್ವಂ ಸೇರಿದಂತೆ 11 ಶಾಸಕರ ಅನರ್ಹತೆಯನ್ನು ತಡೆದದ್ದು ತಾನು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ತದನಂತರ ಪನ್ನೀರ್ ಸೆಲ್ವಂ ಮತ್ತು ಮಾಜಿ ಸಿಎಂ ಎಡಪಡ್ಡಿ ಕೆ ಪಳನಿಸ್ವಾಮಿ ಒಟ್ಟಾಗಿ ನಂತರ ಅವರು 18 ಶಾಸಕರನ್ನು ಪಕ್ಷದಿಂದ ಅನರ್ಹಗೊಳಿಸಿದರು ಎಂದು ಮಾತನಾಡಿದ್ದಾರೆ. 


Stay up to date on all the latest ದೇಶ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp