social_icon

ಭವಿಷ್ಯದಲ್ಲಿ ಡ್ರೋನ್ ದಾಳಿ ಎದುರಿಸಲು ಭಾರತ ಇಸ್ರೇಲ್ ಮಾದರಿಯ 'ಐರನ್ ಡೋಮ್' ನಿರ್ಮಿಸಬೇಕು: ಆನಂದ್ ಮಹೀಂದ್ರಾ

ಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ಎದುರಿಸಲು ಭಾರತ ಕೂಡ ಇಸ್ರೇಲ್ ನಂತೆ ಗಡಿಗಳಲ್ಲಿ ಐರನ್ ಡೋಮ್ ನಿರ್ಮಿಸಬೇಕು ಎಂದು ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗುಂಪಿನ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ.

Published: 30th June 2021 04:45 PM  |   Last Updated: 30th June 2021 05:21 PM   |  A+A-


Iron Dome-Anand Mahindra

ಇಸ್ರೇಲ್ ಐರನ್ ಡೋಮ್ ಮತ್ತು ಆನಂದ್ ಮಹೀಂದ್ರಾ

UNI

ನವದೆಹಲಿ: ಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ಎದುರಿಸಲು ಭಾರತ ಕೂಡ ಇಸ್ರೇಲ್ ನಂತೆ ಗಡಿಗಳಲ್ಲಿ ಐರನ್ ಡೋಮ್ ನಿರ್ಮಿಸಬೇಕು ಎಂದು ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗುಂಪಿನ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭವಿಷ್ಯದಲ್ಲಿ ಎದುರಾಗಬಹುದಾದ ಡ್ರೋನ್ ದಾಳಿಗಳನ್ನು ವಿಶೇಷ ಡ್ರೋನ್‌ಗಳನ್ನು ಖರೀದಿಸಲು ಭಾರತ ಸರ್ಕಾರ ರಕ್ಷಣಾ ಬಜೆಟ್‌ನಲ್ಲಿ ಹಂಚಿಕೆಯನ್ನು ಹೆಚ್ಚಿಸಬೇಕು ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.

ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಮ್ಮ ಯುದ್ಧ ಸಾಮರ್ಥ್ಯಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವನ್ನು ಉಲ್ಲೇಖಿಸಿರುವ ಅವರು "ವಿಶೇಷ ಡ್ರೋನ್‌ ಗಳ ಖರೀದಿಗೆ ರಕ್ಷಣಾ ಬಜೆಟ್‌ನಲ್ಲಿ ಹಂಚಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಬೇಕಾಗಿದೆ" ಎಂದು ಅವರು ಹೇಳಿದ್ದಾರೆ. ಡ್ರೋನ್ ದಾಳಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಇಸ್ರೇಲ್ ಮಾದರಿಯಲ್ಲಿ 'ಐರನ್ ಡೋಮ್' ನಂತಹ ತಂತ್ರಜ್ಞಾನದ ಬಗ್ಗೆ ನಾವು ಕೆಲಸ ಮಾಡಬೇಕಾಗಿದೆ ಎಂದು ಆನಂದ್ ಮಹೀಂದ್ರಾ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೂನ್ 27 ರ ನಸುಕಿನಲ್ಲಿ ಜಮ್ಮುವಿನಲ್ಲಿರುವ ಭಾರತೀಯ ವಾಯುಪಡೆ (ಐಎಎಫ್) ಪ್ರಮುಖ ವಾಯು ನೆಲೆಗಳಲ್ಲಿ ಡ್ರೋನ್‌ಗಳಿಂದ ಎರಡು ಸ್ಪೋಟಗಳು ಸಂಭವಿಸಿವೆ. ಜಮ್ಮು ವಿಮಾನ ನಿಲ್ದಾಣದ ಐಎಎಫ್ ನಿಲ್ದಾಣದಲ್ಲಿ ಶನಿವಾರ ಮಧ್ಯರಾತ್ರಿಯ ನಂತರ ಭಯೋತ್ಪಾದಕರು ಡ್ರೋನ್‌ಗಳ ಸಹಾಯದಿಂದ ಎರಡು  ಬಾಂಬ್‌ಗಳನ್ನು ಬೀಳಿಸಿದ್ದಾರೆ. ಬಾಂಬ್ ಸ್ಫೋಟದಲ್ಲಿ ಇಬ್ಬರು ವಾಯುಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಧ್ಯರಾತ್ರಿ 1.40 ಗಂಟೆ ಸಮಯದಲ್ಲಿ ಕೇವಲ ಆರು ನಿಮಿಷಗಳ ಅವಧಿಯಲ್ಲಿ ಎರಡು ಬಾಂಬ್‌ಗಳನ್ನು ಡ್ರೋನ್‌ ನಿಂದ ಬೀಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಸ್ಫೋಟಗಳಲ್ಲಿ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದ ಕಟ್ಟಡದ ಮೇಲ್ಛಾವಣಿಗೆ ಹಾನಿಯಾಗಿದೆ ಮತ್ತೊಂದು ಬಾಂಬ್‌ ತೆರೆದ ಪ್ರದೇಶದಲ್ಲಿ ಸ್ಫೋಟಗೊಂಡಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ತಿಳಿಸಿದೆ. ಸ್ಪೋಟಗಳಿಂದ ವಿಮಾನ ನಿಲ್ದಾಣದ ಯಾವುದೇ ಸಲಕರಣೆಗಳಿಗೆ ಹಾನಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿತ್ತು.


Stay up to date on all the latest ದೇಶ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp